20
June, 2026

A News 365Times Venture

20
Saturday
June, 2026

A News 365Times Venture

ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪ : ಇಬ್ಬರ ವಿರುದ್ದ FIR ದಾಖಲು

Date:

ಮೈಸೂರು,ಜನವರಿ,18,2025 (www.justkannada.in): ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪದ ಮೇಲೆ ಇಬ್ಬರ ವಿರುದ್ದ ಮೈಸೂರು ಜಿಲ್ಲೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬುವವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.  ಟಿ ಎಲ್ ಎಂಟರ್‌ಪ್ರೈಸಸ್ ಎಟಿಎಂಗೆ ಹಣ‌ ತುಂಬವ ಏಜೆನ್ಸಿ‌ ಪಡೆದಿತ್ತು. ಈ  ಟಿ ಎಲ್ ಎಂಟರ್ ಪ್ರೈಸಸ್‌ ನಲ್ಲಿ ಅಕ್ಷಯ್ ಕೆಲಸ ಮಾಡುತ್ತಿದ್ದರು. ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ ಅಕ್ಷಯ್ ಹಣ‌ ತುಂಬುತ್ತಿದ್ದ. ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡುತ್ತಿದ್ದನು.

ಈ ಮಧ್ಯೆ ಕಂಪನಿ ಆಡಿಟ್ ಮಾಡಿದಾಗ ಹಣದಲ್ಲಿ ವ್ಯತ್ಯಾಸ ಕಂಡು ಬಂದಿದೆ.  ಎಟಿಎಂ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಲಾಗಿದ್ದು ಈ ವೇಳೆ ಆಕ್ಷಯ್ ಎಟಿಎಂ ಹಣ ಹಾಕದೆ ಬ್ಯಾಗ್‌ ನಲ್ಲಿ ತುಂಬಿಕೊಂಡು  ಹೋದ ದೃಶ್ಯ ಸೆರೆಯಾಗಿದೆ.

ಅಕ್ಷಯ್ ಗದ್ದಿಗೆ ಗ್ರಾಮದ ಎಟಿಎಂ ನಲ್ಲಿ 5 ಲಕ್ಷದ 80 ಸಾವಿರ ಹಣ ಲೋಡ್ ಮಾಡಿಲ್ಲ. ಈ ಕೃತ್ಯಕ್ಕೆ ಆಕೆಯ ಪರಿಚಯದ ತೇಜಸ್ವಿನಿ‌ ಎಂಬಾಕೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು,  ಇಬ್ಬರು ಈ ಹಣದಿಂದ ಚಿನ್ನ ಖರೀದಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇಬ್ಬರು ಚಿನ್ನದ ಅಂಗಡಿಯಲ್ಲಿ ಚಿನ್ನ ಖರೀದಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದುಈ ಹಿನ್ನೆಲೆ ಇದೀಗ ಇಬ್ಬರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

Key words: FIR , money, ATM, without, filling, Mysore

The post ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪ : ಇಬ್ಬರ ವಿರುದ್ದ FIR ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മലപ്പുറം ജില്ല വിഭജിക്കുകയല്ല, മലബാറില്‍ ഒരു കേന്ദ്ര ഭരണപ്രദേശമാണ് വേണ്ടത്: വിശ്വ ഹിന്ദു പരിഷത്ത്

തിരുവനന്തപുരം: മലപ്പുറം ജില്ല വിഭജിക്കുന്നതിന് പകരം മലബാര്‍ കേന്ദ്ര ഭരണ പ്രദേശമാക്കണമെന്ന്...

`மாநகராட்சியே நாசமா போச்சு’ | சாயம் வெளுத்த மேயர், துணை மேயர்; வேலூர் திமுக-வில் மோதல்!

வேலூர் மாநகராட்சியின் நிர்வாக சொதப்பல்களால் பல்வேறு பணிகளில் குளறுபடிகள் இருப்பதாகக் குற்றச்சாட்டுகள்...

Siddipet District: కసాయి తల్లి.. ప్రియుడితో ఏకాంతానికి అడ్డొచ్చాడని రెండేళ్ల కొడుకును హతమార్చిన వైనం..

Siddipet District: సిద్దిపేట జిల్లాలో మానవత్వాన్ని మంటగలిపే అత్యంత ఘోరమైన ఉదంతం...

ಪಾದಚಾರಿ ಮಾರ್ಗದಲ್ಲಿ ನಡೆಯುವುದು ಮೂಲಭೂತ ಹಕ್ಕು- ಸುಪ್ರೀಂ ಕೋರ್ಟ್

ನವದೆಹಲಿ,ಜೂನ್,20,2026 (www.justkannada.in): ಸಾರ್ವಜನಿಕ ರಸ್ತೆಗಳಲ್ಲಿನ ಪಾದಚಾರಿ ಮಾರ್ಗಗಳಲ್ಲಿ (ಫುಟ್‌ಪಾತ್‌) ಸುರಕ್ಷಿತವಾಗಿ...