21
June, 2026

A News 365Times Venture

21
Sunday
June, 2026

A News 365Times Venture

ಸುರ್ಜೇವಾಲ ವಿರುದ್ಧ ಸಚಿವರ ಅಸಮಾಧಾನ ವಿಚಾರ: ಸುಳ್ಳು ಹೇಳಿ ವರ್ಚಸ್ಸು ಹಾಳು ಮಾಡ್ತಿದ್ದಾರೆ- ಡಿಕೆ ಶಿವಕುಮಾರ್

Date:

ಬೆಳಗಾವಿ, ಜನವರಿ 20,2025 (www.justkannada.in):  ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ಕೆಲವು ಸಚಿವರು ಅಸಮಾಧಾನಗೊಂಡಿದ್ದಾರೆ ಎಂಬ ಬಗ್ಗೆ ಸುದ್ದಿಯಾದ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ  ಡಿಸಿಎಂ ಡಿಕೆ ಶಿವಕುಮಾರ್, ಸುಳ್ಳು ಹೇಳಿ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಕಿಡಿಕಾರಿದರು.

ನಿನ್ನೆ ಸಚಿವ ಸತೀಶ್ ಜಾರಕಿಹೊಳಿ ಆಪ್ತ ಆಸೀಫ್ ಸೇಠ್ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ನಿನ್ನೆ ಪಕ್ಷದ ಹಿರಿಯ ನಾಯಕರ ನಿವಾಸಕ್ಕೆ ಭೇಟಿ ನೀಡಿದ್ದೆ. ಜಗಳ ಇತ್ತು ಅದಕ್ಕೆ ಹೋಗಿದ್ದರು ಎಂದು ನೀವು ಹೇಳುತ್ತಿದ್ದೀರಿ. ಫಿರೋಜ್ ಸೇಠ್ ಹಿರಿಯರು, ಅವರ ಜತೆ ಕೆಲಸ ಮಾಡಿದ್ದೇವೆ. ಸಂಘಟನೆ ದೃಷ್ಟಿಯಿಂದ ನಿವಾಸಕ್ಕೆ ಹೋಗಿ ಬಂದಿದ್ದೆ ಎಂದು ಮಾಧ್ಯಮಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ರಣದೀಪ್ ಸಿಂಗ್ ಸುರ್ಜೇವಾಲ ಎಲ್ಲರನ್ನೂ ಒಂದೇ ರೀತಿ ನಡೆಸಿಕೊಳ್ಳುತ್ತಿಲ್ಲ. ಅವರ ಬಗ್ಗೆ ರಾಹುಲ್ ಗಾಂಧಿಯವರಿಗೆ ದೂರು ನೀಡಬೇಕು. ರಾಜ್ಯ ಉಸ್ತುವಾರಿಯಿಂದ ವಾಪಸ್ ಕರೆಸಿಕೊಳ್ಳುವಂತೆ ಒತ್ತಡ ಹೇರಬೇಕು’ ಎಂದು ಸಿಎಂ ಸಿದ್ದರಾಮಯ್ಯಗೆ ಕೆಲವು ಮಂದಿ ಸಚಿವರು  ಮನವಿ ಮಾಡಿದ್ದಾರೆ ಎಂದು ವರದಿಯಾಗಿತ್ತು.

Key words: Ministers, dissatisfaction, Surjewala, DK Shivakumar

The post ಸುರ್ಜೇವಾಲ ವಿರುದ್ಧ ಸಚಿವರ ಅಸಮಾಧಾನ ವಿಚಾರ: ಸುಳ್ಳು ಹೇಳಿ ವರ್ಚಸ್ಸು ಹಾಳು ಮಾಡ್ತಿದ್ದಾರೆ- ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘വെള്ളക്കുപ്പായക്കാരനായ ആ ഉന്നത രാഷ്ട്രീയ നേതാവ് വേട്ടക്കാരനൊപ്പം’: ‘അവള്‍ക്കാപ്പം’ പുസ്തകത്തില്‍ ഗുരുതര വെളിപ്പെടുത്തല്‍

കൊച്ചി:മാധ്യമ പ്രവര്‍ത്തകന്‍ ആര്‍ റോഷിപാലിന്റെ ‘അവള്‍ക്കൊപ്പം’ പുസ്തകത്തില്‍ കേരളത്തിലെ ഒരു ഉന്നത...

“இன்னும் அவர் தன்னை அமைச்சராகவே நினைத்துக்கொண்டிருக்கிறார்" – TRB ராஜா குறித்து அமைச்சர் கீர்த்தனா!

தமிழ்நாட்டில் துவங்கவிருந்த நிறுவனங்கள் ஆந்திர மாநிலத்திற்குச் சென்றதாகக் கூறப்படும் புகார்கள்...

Off The Record: శృంగవరపు కోట TDPలో గ్రూప్ వార్!

Off The Record: విజయనగరం జిల్లా శృంగవరపుకోట నియోజకవర్గం రాజకీయాల్లో టాక్‌...

ಜ್ಞಾನಾಧಾರಿತ, ಸಮಗ್ರ ಸಮಾಜ ನಿರ್ಮಾಣದಲ್ಲಿ ದೂರ ಶಿಕ್ಷಣದ ಪಾತ್ರ ಮಹತ್ವದ್ದು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮೈಸೂರು, ಜೂನ್, 20,2026 (www.justkannada.in):  ಜ್ಞಾನವನ್ನು ಸಾರ್ವತ್ರಿಕಗೊಳಿಸುವ ಮತ್ತು ಶಿಕ್ಷಣವನ್ನು...