11
March, 2026

A News 365Times Venture

11
Wednesday
March, 2026

A News 365Times Venture

ಮಡಿವಾಳ ಮಾಚಿದೇವರಂತೆ ವೃತ್ತಿಯಲ್ಲಿ ಕಾಯಕ ನಿಷ್ಠೆ ಕಾಣಬೇಕು : ಬಿ.ಸಿ ಶಿವಾನಂದಮೂರ್ತಿ

Date:

ಮೈಸೂರು,ಫೆಬ್ರವರಿ,1,2025 (www.justkannada.in): ಮಡಿವಾಳ ವೃತ್ತಿಯಲ್ಲಿ ಕಾಯಕ ನಿಷ್ಠೆ ಕಂಡವರುವರು ಮಡಿವಾಳ ಮಾಚಿದೇವ ಎಂದರೆ ತಪ್ಪಾಗುವುದಿಲ್ಲ. ತಮ್ಮ ಕೆಲಸವನ್ನು ಅವರು ವೃತ್ತಿ ಎಂದು ಪರಿಗಣಿಸದೆ ದೇವರ ಕೆಲಸ ಎಂದು ಜನರ ಸೇವೆ ಮಾಡುತ್ತಿದರು. ಅವರ ಆಲೋಚನೆಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ. ಸಿ ಶಿವಾನಂದಮೂರ್ತಿ ಅವರು ಹೇಳಿದರು.

ಇಂದು ಕರ್ನಾಟಕ ಸಂಘದಲ್ಲಿ ಹಮ್ಮಿಕೊಳ್ಳಲ್ಲಾಗಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಅಂಟಿಕೊಂಡಿದ್ದ ಮೋಸ, ದರೋಡೆ, ವಂಚನೆಗಳಂತಹ ಅನಾಚಾರಗಳನ್ನು ಹೋಗಲಾಡಿಸಲು ದೃಢ ಸಂಕಲ್ಪ ತೊಟ್ಟಿ ನಿಂತ ದಾರ್ಶನಿಕ ವ್ಯಕ್ತಿ. ಸಮಾಜದ ಒಳಿತಿಗಾಗಿ ಶ್ರಮಿಸಿದ ಮಾಚಿದೇವ ಅವರ ಕೊಡುಗೆ ನಿಜಕ್ಕೂ ಅಪಾರವಾದದ್ದು ಎಂದರು.

ಉಪ ಪ್ರಾಂಶುಪಾಲರಾದ ಕೊತ್ತತ್ತಿ ರಾಜು ಅವರು ಮಡಿವಾಳ ಮಾಚಿದೇವ ಅವರ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿದರು.

ಸಮಾಜದಲ್ಲಿ ಹೀನಾಯವಾಗಿ ಕಾಣುತ್ತಿದ ಮಡಿವಾಳ ವೃತ್ತಿಗೆ ಘನತೆ, ಗೌರವ ತಂದು ಕೊಟ್ಟವರು ಮಡಿವಾಳ ಮಾಚಿದೇವ ಅವರು ಎಂದರೆ ತಪ್ಪಾಗಲಾರದು, ಅವರು ಬಟ್ಟೆಯನ್ನು ಮಾತ್ರ ಮಡಿ ಮಾಡಿದವರಲ್ಲ  ಸಮಾಜದಲ್ಲಿದ್ದ ಅನಾಚಾರಗಳನ್ನು ತೊಳೆದು ಸಮಾಜವನ್ನು ಮಡಿ ಮಾಡಿದವರು ಎಂದರು.

12 ನೇ ಶತಮಾನದ ವಚನಕಾರರಲ್ಲಿ ಒಬ್ಬರಾದ ಇವರು ವೇದಾ ಪುರಾಣ, ಪರಾಂಗತ, ಸಾಹಿತ್ಯ, ಸಂಸ್ಕೃತಿ, ಬರವಣಿಗೆಗಳಲ್ಲಿ ಅನೇಕ ಕೊಡುಗೆ ನೀಡಿದ್ದಾರೆ. ನಿಜಕ್ಕೂ ಇವರ ಕೊಡುಗೆ ಅಪಾರವಾದದ್ದು ಇಂದಿನ ಯುವ ಪೀಳಿಗೆಗೆ ಇವರ ವಚನಗಳನ್ನು ಓದುವಂತೆ ನಾವೆಲ್ಲ ಒಟ್ಟುಗೂಡಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಮುದಾಯದಲ್ಲಿ ಸಾಧನೆ ಗೈದಿರುವ ಹಾಗೂ ಸಮಾಜ ಸೇವೆ ಮಾಡಿರುವಂತಹ ಗಣ್ಯವ್ಯಕ್ತಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಡಿವಾಳ ಸಂಘದ ಅಧ್ಯಕ್ಷ ಎಂಎನ್  ರವಿ, ನಗರ ಸಭಾ ಅಧ್ಯಕ್ಷ ನಾಗೇಶ್, ಮಾಜಿ ನಗರ ಸಭೆ ಸದಸ್ಯೆ ಪದ್ಮ ನವೀನ್, ವೃತ್ತಿ ಅರೋಗ್ಯ ನಿರೀಕ್ಷಕರಾದ ಗೋವಿಂದ ಮತ್ತು ಮಡಿವಾಳ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Key words: profession, Loyalty, Madiwala Machideva Jayanthi, B.C. Shivanandamurthy

The post ಮಡಿವಾಳ ಮಾಚಿದೇವರಂತೆ ವೃತ್ತಿಯಲ್ಲಿ ಕಾಯಕ ನಿಷ್ಠೆ ಕಾಣಬೇಕು : ಬಿ.ಸಿ ಶಿವಾನಂದಮೂರ್ತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘രാഹുല്‍ ഗാന്ധി പറയുന്ന സത്യങ്ങള്‍ ഭരണപക്ഷത്തിന് ദഹിക്കുന്നില്ല’ ലോക്‌സഭയില്‍ പ്രിയങ്ക ഗാന്ധി

ന്യൂദല്‍ഹി: മോദി സര്‍ക്കാരിന് മുന്നില്‍ ലോക്‌സഭാ പ്രതിപക്ഷ നേതാവ് രാഹുല്‍ ഗാന്ധി...

'நிர்வாகிகளிடம் விருப்ப மனு பெறும் வேல்முருகன்!' – கூடுதல் தொகுதி கிடைக்குமா? த.வா.க ப்ளான் என்ன?

தமிழக வாழ்வுரிமை கட்சித் தலைவர் வேல்முருகன் தனது கட்சி நிர்வாகிகளிடம் விருப்ப...

AP High Court: అవినీతి అధికారులకు షాకిచ్చిన హైకోర్టు.. సీజ్‌ చేసిన నగల విడుదలకు బ్రేక్..

AP High Court: అవినీతి కేసుల్లో ప్రభుత్వ ఉద్యోగుల నుంచి స్వాధీనం...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ...