2
May, 2026

A News 365Times Venture

2
Saturday
May, 2026

A News 365Times Venture

ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಮುಕ್ತ- ಪ್ರಧಾನಿ ಮೋದಿ

Date:

ನವದೆಹಲಿ, ಫೆಬ್ರವರಿ,4,2025 (www.justkannada.in):  ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಳೆದ 10 ವರ್ಷದಲ್ಲಿ 25 ಕೋಟಿ ಜನರನ್ನು ಬಡತನ ರೇಖೆಯಿಂದ ಹೊರತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ವಂದನಾ ನಿರ್ಣಯಕ್ಕೆ ಉತ್ತರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಹಿಂದೆ 40 ವರ್ಷಗಳ ಕಾಲ ಗರೀಬಿ ಹಠಾವೋ ಎಂದು ಘೋಷಣೆ ಕೂಗಿದವರು ಬಡತನ ನಿರ್ಮೂಲನೆ ಮಾಡಲಿಲ್ಲ. ಆದರೆ, ನಾವು ಸುಳ್ಳಿನ ಘೋಷಣೆ ಮಾಡಿಲ್ಲ. 4 ದಶಕದಲ್ಲಿ ಮಾಡಲಾಗದ ಕೆಲಸವನ್ನು ಒಂದೇ ದಶಕದಲ್ಲಿ ನಾವು ಮಾಡಿದ್ದೇವೆ. ಬಡತನ ನಿವಾರಿಸುವ ಕೆಲಸ ಮಾಡಿದ್ದೇವೆ. ಈವರೆಗೆ ಹೊಸದಾಗಿ 4 ಕೋಟಿ ಮನೆ ನಿರ್ಮಿಸಿಕೊಟ್ಟಿದ್ದೇವೆ ಎಂದು ತಿಳಿಸಿದರು.

ಕಷ್ಟದ ಜೀವನವನ್ನು ನಡೆಸಿದವರಿಗೆ ಮಾತ್ರ ಮನೆ ಪಡೆಯುವುದರ ಮೌಲ್ಯ ಏನೆಂದು ಅರ್ಥವಾಗುತ್ತದೆ. ಹಿಂದಿನ ಕಾಲದಲ್ಲಿ ಮಹಿಳೆಯರು ಶೌಚಾಲಯ ವ್ಯವಸ್ಥೆಯ ಕೊರತೆಯಿಂದ ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದರು. ನಾವು 12 ಕೋಟಿಗೂ ಹೆಚ್ಚು ಶೌಚಾಲಯ ನಿರ್ಮಿಸಿದ್ದೇವೆ. ಈ ಎಲ್ಲ ಸೌಲಭ್ಯಗಳನ್ನು ಹೊಂದಿರುವವರು ಅದರಿಂದ ವಂಚಿತರಾದವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು  ಹೇಳಿದರು.

ನಾವು 2025ನೇ ವರ್ಷದಲ್ಲಿದ್ದೇವೆ. 21ನೇ ಶತಮಾನದ 25% ಭಾಗ ಅಂತ್ಯವಾಗಿದೆ. ಸ್ವಾತಂತ್ರ್ಯದ ಬಳಿಕ ಏನು ಬದಲಾಗಿದೆ ಎಂಬುದನ್ನು ಸಮಯ ನಿರ್ಧಾರ ಮಾಡಲಿದೆ. ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಭವಿಷ್ಯದ 25 ವರ್ಷದ ವಿಕಸಿತ್ ಭಾರತದ ಕಲ್ಪನೆಯನ್ನು ತೆರೆದಿಟ್ಟಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣ ವಿಕಸಿತ್ ಭಾರತದ ಸಂಕಲ್ಪವನ್ನು ಗಟ್ಟಿಗೊಳಿಸಿದೆ. ನಮ್ಮ ದೇಶದ ಜನರು 10 ವರ್ಷದಿಂದ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಾರೆ. ಅವರಿಗೆ ಧನ್ಯವಾದ ಎಂದು ಪ್ರಧಾನಿ ಮೋದಿ ಹೇಳಿದರು.

ನಿವಾಸಿಗಳಲ್ಲದಿದ್ದರೂ ಯೋಜನೆ  ಲಾಭ ಪಡೆಯುತ್ತಿದ್ದರು.  10 ಕೋಟಿ ನಕಲಿ ಜನರನ್ನ ತೆಗೆದುಹಾಕಿದ್ದೇವೆ.  ತಪ್ಪು ಕೈಗಳಿಗೆ ಯೋಜನೆ ಹೋಗುವುದನ್ನ ತಪ್ಪಿಸಿದ್ಧೇವೆ.   3 ಲಕ್ಷ ಕೋಟಿ ಹಣ ತಪ್ಪು ಜನರಿಗೆ ಹೋಗುವುದನ್ನ ತಪ್ಪಿಸಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Key words: 25 crore, people, freed, poverty, PM Modi

The post ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಮುಕ್ತ- ಪ್ರಧಾನಿ ಮೋದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഡി.എം.കെ 180 ലേറെ സീറ്റുകള്‍ നേടും; ടി.വി.കെ പിളര്‍ക്കുക എ.ഐ.എ.ഡി.എം.കെ വോട്ടുകളെന്ന് ഡി.എം.കെ വക്താവ്

ചെന്നൈ: തമിഴ്‌നാട്ടില്‍ 180ലേറെ സീറ്റുകള്‍ നേടി വന്‍ ഭൂരിപക്ഷത്തോടെ ഭരണം നിലനിര്‍ത്തുമെന്ന്...

"இந்தியர்கள் வேண்டாம்..!" – தைவானில் அரசின் முடிவுக்குக் கிளம்பும் எதிர்ப்பும் எதார்த்த நிலையும்!

தைவானில் நிலவும் கடுமையான தொழிலாளர் பற்றாக்குறையைச் சமாளிக்க, இந்தியாவுடன் தைவான் அரசு...

Tamil Nadu Politics: తమిళనాడులో రాజకీయ సంచలనం.. ‘విజయ్’ కింగ్ మేకర్‌గా మారతారా? మరో షాకింగ్‌ సర్వే!

Tamil Nadu Politics: తమిళనాడు రాజకీయాల్లో భారీ మార్పులకు దారితీసేలా ఒక...

ಮೇ 3 ರಂದು ‘ಕಾಯಕ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮೇ,1,2026 (www.justkannada.in): ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಕಾಯಕ ಸೇವಾ...