2
May, 2026

A News 365Times Venture

2
Saturday
May, 2026

A News 365Times Venture

ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ.ಪಾಟೀಲ

Date:

ನವದೆಹಲಿ, ಫೆ.04, 2025 (www.justkannada.in): ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.

ಮೊದಲಿಗೆ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ಮಾಡಿದ ಸಚಿವರು, ನಂತರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಅಲ್ಲಿಂದ ಜೋಶಿ ಅವರ ಸಂಸತ್ತಿನ ಕಚೇರಿಗೆ ತೆರಳಿದ ಪಾಟೀಲರು, ಅವರ ಕಚೇರಿಯಲ್ಲಿ ಸಮಾವೇಶ ಕುರಿತು ರಾಜ್ಯದ ನಾಯಕರೊಂದಿಗೆ ಸಭೆ ನಡೆಸಿದರು.

ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಂಡ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದರು.

ಪಾಟೀಲ ಅವರು ಬುಧವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ಕೇಂದ್ರ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ, ಸಮಾವೇಶಕ್ಕೆ ಆಹ್ವಾನಿಸಲಿದ್ದಾರೆ.

The post ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ.ಪಾಟೀಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഡി.എം.കെ 180 ലേറെ സീറ്റുകള്‍ നേടും; ടി.വി.കെ പിളര്‍ക്കുക എ.ഐ.എ.ഡി.എം.കെ വോട്ടുകളെന്ന് ഡി.എം.കെ വക്താവ്

ചെന്നൈ: തമിഴ്‌നാട്ടില്‍ 180ലേറെ സീറ്റുകള്‍ നേടി വന്‍ ഭൂരിപക്ഷത്തോടെ ഭരണം നിലനിര്‍ത്തുമെന്ന്...

"இந்தியர்கள் வேண்டாம்..!" – தைவானில் அரசின் முடிவுக்குக் கிளம்பும் எதிர்ப்பும் எதார்த்த நிலையும்!

தைவானில் நிலவும் கடுமையான தொழிலாளர் பற்றாக்குறையைச் சமாளிக்க, இந்தியாவுடன் தைவான் அரசு...

Tamil Nadu Politics: తమిళనాడులో రాజకీయ సంచలనం.. ‘విజయ్’ కింగ్ మేకర్‌గా మారతారా? మరో షాకింగ్‌ సర్వే!

Tamil Nadu Politics: తమిళనాడు రాజకీయాల్లో భారీ మార్పులకు దారితీసేలా ఒక...

ಮೇ 3 ರಂದು ‘ಕಾಯಕ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮೇ,1,2026 (www.justkannada.in): ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಕಾಯಕ ಸೇವಾ...