7
March, 2026

A News 365Times Venture

7
Saturday
March, 2026

A News 365Times Venture

ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ, ನ್ಯಾಯಾಂಗ ತನಿಖೆ ಮಾಡಿ: ಆರ್‌.ಅಶೋಕ್ ಆಗ್ರಹ

Date:

ಮಂಡ್ಯ, ಫೆಬ್ರವರಿ,6,2025 (www.justkannada.in):  ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ ಭೇಟಿ ನೀಡಿ ಸಾಂತ್ವನ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದರು.

ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರಿಗೆ ಕಣ್ಣಿಲ್ಲ. ಕೊನ್ನಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ, ನವಚೇತನ, ಸೂರ್ಯೋದಯ, ಯುನಿಟಿ, ಪ್ರಗತಿ ಸೇರಿದಂತೆ 24 ಮೈಕ್ರೋ ಫೈನಾನ್ಸ್‌ಗಳು ಈ ಹಳ್ಳಿಗೆ ಬಂದು ವರ್ಷಕ್ಕೆ 12% ರಂತೆ ಸಾಲ ನೀಡಿವೆ. ಒಬ್ಬರಿಗೆ ಒಂಬತ್ತು ಜನರು ಶೂರಿಟಿ ನೀಡಿದ್ದಾರೆ. ಒಬ್ಬರು ಸಾಲ ಮರುಪಾವತಿ ಮಾಡಿಲ್ಲವೆಂದರೆ ಉಳಿದವರು ಹೊಣೆಯಾಗುತ್ತಾರೆ. ಸಾಲ ಕಟ್ಟದೆ ಮಾನ ಹೋದಾಗ ನೊಂದವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಪೊಲೀಸರು ಕೂಡ ಇಲ್ಲಿ ಮೈಕ್ರೋ ಫೈನಾನ್ಸ್‌ಗೆ ಬೆಂಬಲ ನೀಡಿದ್ದಾರೆ. ಮನೆ ವಶಕ್ಕೆ ಪಡೆಯುವ ಸಮಯದಲ್ಲಿ ಪೊಲೀಸರು ಕುಟುಂಬ ಸದಸ್ಯರನ್ನು ಎಳೆದು ಹೊರಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ 60 ಮೈಕ್ರೋ ಫೈನಾನ್ಸ್‌ಗಳಿದ್ದು, ಕೇವಲ 18 ಮಾತ್ರ ಅಧಿಕೃತವಾಗಿವೆ. ಉಳಿದವುಗಳಲ್ಲಿ ರೌಡಿಗಳಿದ್ದಾರೆ. ತಹಶೀಲ್ದಾರ್‌ ಹಾಗೂ ಪೊಲೀಸರು ಎಲ್ಲ ಹಳ್ಳಿಗೂ ಹೋಗಿ ಕ್ರಮ ಕೈಗೊಳ್ಳಬೇಕಿತ್ತು. ಈ ಸಾವುಗಳಿಗೆ ನ್ಯಾಯ ನೀಡಲು ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಬೇಕು. ಅನಧಿಕೃತ ಮೈಕ್ರೋ ಫೈನಾನ್ಸ್‌ಗಳನ್ನು ಪತ್ತೆ ಮಾಡಿ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

Key words: justice, died, microfinance, R. Ashok

The post ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ, ನ್ಯಾಯಾಂಗ ತನಿಖೆ ಮಾಡಿ: ಆರ್‌.ಅಶೋಕ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು...

യു.എസ് താവളങ്ങള്‍ നിങ്ങള്‍ക്ക് സംരക്ഷണമല്ല, ഭീഷണി; ഇസ്രഈലിന് വേണ്ടി അറബ് രാഷ്ട്രങ്ങളെ ഉപയോഗിക്കുകയാണ്: റഷ്യ

മോസ്‌കോ: പേര്‍ഷ്യന്‍ ഉള്‍ക്കടലില്‍ സ്ഥിതി ചെയ്യുന്ന യു.എസ് സൈനിക താവളങ്ങള്‍ പശ്ചിമേഷ്യയിലെ...

மாவட்டம் Vs வாரிசு; அண்ணா நகருக்குக் குறிவைக்கும் இருவர்! யாரை டிக் அடிக்கப் போகிறார் மாப்பிள்ளை?

உடன்பிறப்புகளிடம் விருப்ப மனுக்களை வாங்கி முடித்திருக்கிறது அறிவாலயம். கருணாநிதி போட்டியிட்ட சென்னையின்...