21
June, 2026

A News 365Times Venture

21
Sunday
June, 2026

A News 365Times Venture

ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ – ಕೇಂದ್ರ ಸಚಿವ ಹೆಚ್.ಡಿ.ಕೆ

Date:

ನವದೆಹಲಿ,ಫೆಬ್ರವರಿ,8,2025 (www.justkannada.in): ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿರುವ ಹೆಚ್.ಡಿಕುಮಾರಸ್ವಾಮಿ, ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು, ಗೃಹ ಸಚಿವ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಕೇಂದ್ರ ಸಚಿವ ಹೆಚ್ ಡಿಕೆ ತಿಳಿಸಿದ್ದಾರೆ.

Key words: Delhi Assembly, results, Union Minister, HDK

The post ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ – ಕೇಂದ್ರ ಸಚಿವ ಹೆಚ್.ಡಿ.ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹിസ്ബുല്ലയെ നേരിടാന്‍ ഇസ്രഈലിന് കഴിയുന്നില്ലെങ്കില്‍ ആ ചുമതല സിറിയയെ ഏല്‍പ്പിക്കണം: വീണ്ടും നിലപാട് വ്യക്തമാക്കി ട്രംപ്

വാഷിങ്ടണ്‍: ലെബനനിലെ ഹിസ്ബുല്ലയെ തുരത്തുന്ന കാര്യത്തില്‍ ഇസ്രഈലിന്റെ പ്രകടനത്തില്‍ കടുത്ത അതൃപ്തി...

கேரளம்: புதிய மாவட்டங்கள் உருவாக்க திட்டம்; திரூர், மூவாற்றுப்புழாவில் முதற்கட்ட நடவடிக்கை!

கேரள மாநில நிர்வாகத்தில் ஒரு வரலாற்றுச் சிறப்புமிக்க மாற்றமாக, புதிய மாவட்டங்கள்...

Virat Kohli: మళ్లీ టెస్టుల్లోకి విరాట్ కోహ్లీ..? జూలై 14 నుంచి మైదానంలోకి కింగ్..

భారత రన్ మెషిన్, సూపర్‌స్టార్ క్రికెటర్ విరాట్ కోహ్లీ టెస్ట్ క్రికెట్‌లోకి...

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

ಬೆಂಗಳೂರು,ಜೂನ್,20,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನ ಪಕ್ಷ...