3
May, 2026

A News 365Times Venture

3
Sunday
May, 2026

A News 365Times Venture

ಯುವಕನಿಂದ ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ

Date:

ಮೈಸೂರು,ಫೆಬ್ರವರಿ,14,2025 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟ ದೇವಾಲಯದ ಅರ್ಚಕ  ದೇವಪ್ರಸಾದ್ ದೀಕ್ಷಿತ್  ಅವರ  ಮೇಲೆ ಯುವಕನೊಬ್ಬ ಹಲ್ಲೆ ಮಾಡಿ ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ.

ಸಿದ್ದಾರ್ಥ ಬಡಾವಣೆಯ ಶಾಂತಲಾ ಶಾಲೆ ಮುಖ್ಯಸ್ಥ ಪ್ರೊ. ಸಂತೋಷ್ ಮಗ ಸಿದ್ದಾಂತ್  ಎಂಬಾತ ಅರ್ಚಕ ದೇವಪ್ರಸಾದ್ ದೀಕ್ಷಿತ್ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ದೇವಪ್ರಸಾದ್ ದೀಕ್ಷಿತ್  ಅವರ ಕುಟುಂಬ ಮೈಸೂರಿನ‌ ಸಿದ್ದಾರ್ಥ ನಗರ ಬಡಾವಣೆಯಲ್ಲಿ ವಾಸಿಸುತ್ತಿದ್ದು,  ಅದೇ ಬಡಾವಣೆಯಲ್ಲಿ ಪ್ರೊ. ಸಂತೋಷ್ ಕುಟುಂಬ ಸಹ ಇದೆ.

ಈ ಮಧ್ಯೆ ಸಿದ್ದಾಂತ್  ಸೋಮವಾರ ರಾತ್ರಿ 9 ಗಂಟೆ ಸಮಯದಲ್ಲಿ ಏಕಾಏಕಿ ದೇವಪ್ರಸಾದ್ ದೀಕ್ಷಿತ್ ಅವರ ಮನೆಗೆ ನುಗ್ಗಿ ಹಣ ಕೊಡುವಂತೆ ಪೀಡಿಸಿದ್ದಾನೆ. ಹಣ ಕೊಡದಿದ್ದಾಗ ದೇವಪ್ರಸಾದ್ ದೀಕ್ಷಿತ್ ಮುಖಕ್ಕೆ ಗುದ್ದಿ, ಗಾಯಗೊಳಿಸಿದ್ದು, ಆ ವೇಳೆಗೆ ಮನೆಗೆ ಬಂದ ದೇವಪ್ರಸಾದ್ ದೀಕ್ಷಿತ್ ಮಗ ಸುದೇವ್ ನೆರೆಹೊರೆಯವರ ಸಹಾಯ ಪಡೆದು ಸಿದ್ದಾಂತ್ ನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನು ಮಗನ ಹುಚ್ಚಾಟದ ವಿಚಾರ ಗೊತ್ತಾಗಿ ಪ್ರೊ. ಸಂತೋಷ್ ಪತ್ನಿ ಹಾಗೂ ಸಿದ್ದಾಂತ್ ತಾಯಿಯು  ದೀಕ್ಷಿತ್ ರ ಮನೆಗೆ ಬಂದು ಗೋಳಾಡಿದ್ದಾರೆ. ಸಿದ್ದಾಂತ್ ತಾಯಿಯ ಗೋಳಾಟ ಕಂಡು ಮರುಗಿದ ದೇವ ಪ್ರಸಾದ್ ಕುಟುಂಬ ಫೊಲೀಸರಿಗೆ ದೂರು ಕೊಡಲು ಹಿಂದೇಟು ಹಾಕಿದ್ದಾರೆ.

Key words: Drug addict, youth, Attack, priests, Chamundi Hills

The post ಯುವಕನಿಂದ ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യയിൽ അമേരിക്കയ്ക്ക് കനത്ത പ്രഹരം; 16 സൈനിക താവളങ്ങൾ തകർത്തെന്ന് റിപ്പോർട്ട്

ടെഹ്‌റാൻ: പശ്ചിമേഷ്യയിലെ സൈനിക നീക്കങ്ങളിൽ ഇറാനും സഖ്യകക്ഷികളും എട്ട് രാജ്യങ്ങളിലായി ചുരുങ്ങിയത്...

வேளாங்கண்ணி: சர்ச் முன்பு திரண்ட தொண்டர்கள்; ரத்தான விஜய் வருகை; விமர்சனத்துக்கு உள்ளான தவெக கோஷம்!

தமிழ்நாடு சட்டமன்றத் தேர்தல் முடிவுகள் நாளை எண்ணப்படுகிறது. எக்ஸிட் போல் கருத்துக்...

AP Govt Employee Promotions: ప్రభుత్వ ఉద్యోగులకు ప్రమోషన్ల అంశంలో గవర్నమెంట్ కీలక నిర్ణయం..

AP Govt Employee Promotions: ఆంధ్రప్రదేశ్ ప్రభుత్వ ఉద్యోగులకు ప్రమోషన్ల ప్రక్రియను...