18
August, 2026

A News 365Times Venture

18
Tuesday
August, 2026

A News 365Times Venture

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕ ರದ್ದು ಕೋರಿ ಹೈಕೋರ್ಟ್ ಮೊರೆ: ಸರ್ಕಾರಕ್ಕೆ  ನೋಟಿಸ್

Date:

ಬೆಂಗಳೂರು, ಫೆ.೧೪,೨೦೨೫: ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,  ರಾಜ್ಯ ಸರ್ಕಾರ ಹಾಗೂ  ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ .ನರೇಂದ್ರಸ್ವಾಮಿ ಅವರಿಗೆ ನೋಟಿಸ್ ನೀಡಿದೆ.

ಘಟನೆ ಹಿನ್ನೆಲೆ:

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಆರ್. ಆಂಜನೇಯರೆಡ್ಡಿ ಬುಧವಾರ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.  ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ರಾಜ್ಯ ಸರ್ಕಾರ ಮತ್ತು ಶಾಸಕ ನರೇಂದ್ರ ಸ್ವಾಮಿ ಸೇರಿ ಪ್ರತಿವಾದಿಗಳಿಗೆ ಹೈ ಕೋರ್ಟ್ ವಿಭಾಗೀಯ ಪೀಠದಿಂದ ನೋಟಿಸ್ ಜಾರಿ.

ಅರ್ಜಿದಾರರ ಪರ ವಾದ ಮಂಡಿಸಿದ ನ್ಯಾಯವಾದ ಎಕ್ಸ್‌.ಎಂ.ಜೋಸೆಫ್‌, ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ನೇಮಕ ಮಾಡಲಾಗಿದೆ. ಆದ್ದರಿಂದ ಮಂಡಳಿ ಅಧ್ಯಕ್ಷರಾಗಿ ನರೇಂದ್ರಸ್ವಾಮಿ ನೇಮಕ ರದ್ದು ಪಡಿಸಲು ಅರ್ಜಿಯಲ್ಲಿ ಮನವಿ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳ ಅಧ್ಯಕ್ಷರ ನೇಮಕ ಸಂಬಂಧ ಸುಪ್ರೀಂ ಕೋರ್ಟ್ ಸ್ಪಷ್ಟ ಮಾರ್ಗಸೂಚಿ ಹೊರಡಿಸಿದೆ. ಆದರೆ ರಾಜ್ಯ ಸರ್ಕಾರ ಆ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದೆ. ಅಲ್ಲದೆ, ಪರಿಸರ ವಿಜ್ಞಾನ ಸೇರಿದಂತೆ ಯಾವುದೇ ನಿರ್ದಿಷ್ಟ ಅರ್ಹತೆ ಇಲ್ಲದವರನ್ನು ರಾಜಕೀಯ ಕಾರಣಗಳಿಗೆ ನೇಮಕ ಮಾಡಲಾಗಿದೆ. ಹಾಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರಾಗಿ ಪಿ.ಎಂ. ನರೇಂದ್ರಸ್ವಾಮಿ ನೇಮಕ ಮಾಡಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ವಾದಿಸಿದರು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲರು, ಸರಕಾರ ಸುಪ್ರೀಂಕೋರ್ಟ್‌ನ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಕೇಂದ್ರ ಸರಕಾರ ರೂಪಿಸಿರುವ ನಿಯಮಗಳನ್ನು ಸಂಪೂರ್ಣವಾಗಿ ರಾಜ್ಯ ಸರಕಾರ ಅಳವಡಿಸಿಕೊಂಡಿಲ್ಲ, ಆದರೆ ತನ್ನದೇ ಆದ ಸಮಗ್ರ ನಿಯಮಾವಳಿಗಳನ್ನು ರೂಪಿಸಿ ಅದನ್ನು ಆಧರಿಸಿ ಮಂಡಳಿ ಅಧ್ಯಕ್ಷರನ್ನು ನೇಮಿಸಲಾಗಿದೆ. ಆ ಬಗ್ಗೆ ವಿವಿಧ ರಾಜ್ಯಗಳಲ್ಲಿಏನೇನು ನಿಯಮಗಳಿವೆ ಎಂಬುದನ್ನು ಸಂಗ್ರಹಿಸಿ ಅವುಗಳನ್ನು ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕೆಂದು ಕೋರಿದರು.

ಈ ಹಿನ್ನೆಲೆಯಲ್ಲಿ ನ್ಯಾಯಾಲಯ,  ಸರಕಾರ ಮತ್ತು ಮಂಡಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸಮಯಾವಕಾಶ ನೀಡಿ ವಿಚಾರಣೆಯನ್ನು ಮಾ.17ಕ್ಕೆ  ಮುಂದೂಡಿತು.

key words:  HC, seeking quashing, appointment of, pollution control board chairman, notice to govt

SUMMARY:

HC seeking quashing of appointment of pollution control board chairman, issues notice to govt

The court was hearing a petition challenging the appointment of MLA P M Narendraswamy as chairman of the Karnataka State Pollution Control Board (KSPCB) in violation of the Supreme Court guidelines.

The post ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕ ರದ್ದು ಕೋರಿ ಹೈಕೋರ್ಟ್ ಮೊರೆ: ಸರ್ಕಾರಕ್ಕೆ  ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രതിഷേധിച്ച വിദ്യാർത്ഥികൾക്കെതിരായ എഫ്.ഐ.ആർ പിൻവലിക്കുന്നതിൽ കേന്ദ്രം കാലതാമസം വരുത്തുന്നു; നഷ്ടപരിഹാരം നൽകുമെന്ന ഉറപ്പും പാലിച്ചില്ല: സി.ജെ.പി

ന്യൂദൽഹി: ധർമേന്ദ്ര പ്രധാന്റെ രാജി ആവശ്യപ്പെട്ട് പ്രതിഷേധിച്ചവർക്കെതിരായ എഫ്‌.ഐ.ആറുകൾ പിൻവലിക്കുന്നതിൽ കേന്ദ്രസർക്കാർ...

தலைமைச் செயலகத்தில் முதல்வருடன் சந்திப்பு; `இது குறித்தெல்லாம்தான் பேசினேன்' – திருமா சொல்வதென்ன?

நேற்று கள்ளக்குறிச்சி உளுந்தூர்பேட்டையில் விடுதலைச் சிறுத்தைகள் கட்சி, ‘தமிழ்த் தேசிய எழுச்சி...

Adulterated Ghee: పాడైపోయిన క్రీమ్‌తో నెయ్యి దందా.. 25 టన్నుల నకిలీ నెయ్యి పట్టివేత..

హైదరాబాద్ నగరంలో ప్రజల ఆరోగ్యంతో చెలగాటమాడుతున్న కల్తీ నెయ్యి మాఫియాపై హైదరాబాద్...

KPSC ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್ ಮರುನೇಮಕಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಆಗಸ್ಟ್,​​ 18,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಆರೋಪಕ್ಕೆ...