14
May, 2026

A News 365Times Venture

14
Thursday
May, 2026

A News 365Times Venture

ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತರ ನೋಟೀಸ್..!

Date:

ಮೈಸೂರು,ಫೆಬ್ರವರಿ,19,2025 (www.justkannada.in):  ರಾಜ್ಯದಲ್ಲಿ ಭಾರಿ ಚರ್ಚಿತವಾಗಿದ್ದ ಮುಡಾ ಹಗರಣ ವಿಚಾರಕ್ಕೆ ಟ್ವಿಸ್ಟ್ ಸಿಕ್ಕಿದ್ದು ಸಾಕ್ಷ್ಯಾಧಾರಗಳ ಕೊರತೆ  ಎಂದು  ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ.

ಲೋಕಾಯುಕ್ತ ಎಸ್ಪಿ ಉದೇಶ್ ಅವರು ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದು, ನೀವು ನೀಡಿದ ದೂರು ಸಂಬಂಧ 1ನೇ ಆರೋಪಿಯಿಂದ 4ನೇ ಆರೋಪಿವರೆಗೆ ವಿಚಾರಣೆ ನಡೆಸಲಾಗಿದೆ. ಇದು ಸಿವಿಲ್ ಸ್ವರೂಪ್ಪದ್ದಾಗಿದೆ. ಹಾಗೆಯೇ ಈ ಪ್ರಕರಣ ತನಿಖೆ ನಡೆಸಲು ತಕ್ಕುದಲ್ಲ, ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ . ಜೊತೆಗೆ ಸಾಕಷ್ಟು ಸಾಕ್ಷ್ಯಾಧಾರಗಳ ಕೊರೆತೆಯಿದೆ. ಎಲ್ಲಾ ಆರೋಪಿಗಳ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪ ಸಾಬೀತಾಗಿಲ್ಲ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ ಈ ವರದಿಯನ್ನು ವಿರೋಧಿಸುವುದಿದ್ದರೆ, ತಾವು ಈ ನೋಟೀಸು ತಲುಪಿದ ಒಂದು ವಾರದೊಳಗಾಗಿ ಮ್ಯಾಜಿಸ್ಟ್ರೇಟರ ಎದುರು ಆ ಬಗ್ಗೆ ವಿರೋಧಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ಆರೋಪಿ-1 ರಿಂದ ಆರೋಪಿ-4 ರವರೆಗಿನ ಮೇಲಿನ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲವಾದ್ದರಿಂದ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ.  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2016ನೇ ಸಾಲಿನಿಂದ 2024ನೇ ಸಾಲಿನವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಕಲಂ 173 (8) ಸಿ.ಆರ್.ಪಿ.ಸಿ ರೀತ್ಯಾ ಹೆಚ್ಚುವರಿ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ನೋಟಿಸ್ ನಲ್ಲಿ ಎಸ್ಪಿ ಉದೇಶ್ ತಿಳಿಸಿದ್ದಾರೆ.

Key words: Muda case,  Lokayukta, notice , Snehamayi Krishna.

The post ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತರ ನೋಟೀಸ್..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സര്‍ക്കാരിനെ നയിക്കാന്‍ അര്‍ഹന്‍ വി.ഡി. സതീശന്‍, ലീഗിന് അവകാശപ്പെട്ടത് ചോദിച്ച് വാങ്ങണം; തുറന്ന കത്തുമായി സി.എസ്.എഫ്.ഇ.ജെ.പി

തിരുവനന്തപുരം: മുസ്‌ലിം ലീഗ് നേതൃത്വത്തിന് തുറന്ന കത്തുമായി ഗവേഷകരും അധ്യാപകരും വിദ്യാര്‍ത്ഥികളും...

‘தவெக-அதிமுக கூட்டணி சேர்வதை மக்கள் விரும்ப மாட்டார்கள்’ – போர்க்கொடி தூக்கிய காங்கிரஸ்

தமிழ்நாடு காங்கிரஸ் மாநில பொதுச் செயலாளர் கணபதி சிவக்குமார் வெளியிட்டுள்ள அறிக்கையில்,...

UP: యూపీలో భారీ తుపాను.. 11 మంది మృతి

ఉత్తరప్రదేశ్‌ను భారీ తుపాను గజగజలాడించింది. బుధవారం భదోహి, బుదౌన్ జిల్లాల్లో భారీ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಪುಣೆ,ಮೇ,13,2026 (www.justkannada.in): ದೇಶಾದ್ಯಂತ ಭಾರೀ ಸುದ್ದಿಯಾಗಿರುವ ನೀಟ್ ಯುಜಿ ಪ್ರಶ್ನೆ...