31
May, 2026

A News 365Times Venture

31
Sunday
May, 2026

A News 365Times Venture

9 ವಿಶ್ವವಿದ್ಯಾಲಯಗಳನ್ನ ಮುಚ್ಚುವುದಿಲ್ಲ, ವಿಲೀನ ಮಾಡುತ್ತಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

Date:

ಬೆಂಗಳೂರು, ಮಾರ್ಚ್​,6,2025 (www.justkannada.in): 9 ವಿಶ್ವವಿದ್ಯಾಲಯಗಳನ್ನ ಮುಚ್ಚುವುದಿಲ್ಲ, ಅವುಗಳನ್ನ ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತಿದ್ದೇವೆ ಎಂದು  ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ  9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವ ಬಗ್ಗೆ  ವಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು.

ಈ ವೇಳೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್, ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ. ಮುಚ್ಚುತ್ತಿದ್ದೇವೆ ಅಂತಲ್ಲ. ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ಅಥವಾ ಮಂಡ್ಯ ವಿವಿಯಲ್ಲಿ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸ ಇದೆ. ಎಸ್.ಎಂ. ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ವಿಜಯೇಂದ್ರ ಅವರ ಅಕ್ಕನ ಮಗನಿಗೆ ಪಿಇಎಸ್ ವಿವಿಯಲ್ಲಿ ಓದಿದ್ದರೂ ವಿದೇಶಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಸಿಗಲಿಲ್ಲ. ಬೆಂಗಳೂರಿಗೆ ಪಿಇಎಸ್ ಫೇಮಸ್ ಕಾಲೇಜು. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವೇಶ ಸಿಗಲಿಲ್ಲ. ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ ಮುಚ್ಚುತ್ತಿದ್ದೇವೆ ಅಂತಲ್ಲ ಎಂದು ತಿಳಿಸಿದರು.

Key words: 9 universities, not close, merge, DCM, DK Sivakumar

The post 9 ವಿಶ್ವವಿದ್ಯಾಲಯಗಳನ್ನ ಮುಚ್ಚುವುದಿಲ್ಲ, ವಿಲೀನ ಮಾಡುತ್ತಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആര്‍ത്തവ അവധി സ്വകാര്യതയെ ബാധിക്കും: യു.ഡി.എഫ് സര്‍ക്കാര്‍ തീരുമാനത്തില്‍ ലീഗ് നേതാവ്

തിരുവനന്തപുരം: സംസ്ഥാനത്ത് വിദ്യാര്‍ത്ഥിനികള്‍ക്ക് മൂന്ന് ദിവസം ആര്‍ത്തവ അവധി അനുവദിക്കാനുള്ള സര്‍ക്കാര്‍...

ஈரான் அணு ஆயுதத்தின் மீது அமெரிக்கா ஃபுல் ஃபோக்கஸ்; ஆனால், சீனாவோ அமெரிக்காவிற்கு எதிராக பக்கா ரெடி!

ஈரானிடம் இருந்து செறிவூட்டப்பட்ட யுரேனியத்தை வாங்க அமெரிக்கா தீவிரமாக முயற்சித்து வருகிறது....

Wife Harassment: భార్య వేధిస్తుంది, మరణించే అనుమతి ఇవ్వండి..

Wife Harassment: భార్య వేధింపులు భరించలేక ఒక భర్త కారుణ్య మరణాన్ని...

ತಳ ಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ ಹೆಚ್. ವೆಂಕಟರಮಣ್ಣಪ್ಪ -ಸಿದ್ದರಾಮಯ್ಯ

ತುಮಕೂರು,ಮೇ,30,2026 (www.justkannada.in):  ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು...