19
March, 2026

A News 365Times Venture

19
Thursday
March, 2026

A News 365Times Venture

ಡಿಕೆ ಶಿವಕುಮಾರ್ ಔತಣಕೂಟಕ್ಕೆ ಪರಮೇಶ್ವರ್ ಗೈರಾಗಿದ್ದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಮಾರ್ಚ್, 15,2025 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಐದು ವರ್ಷ ಅವಧಿ ಪೂರೈಸಿದ ಅಂಗವಾಗಿ ಪಕ್ಷದ ಶಾಸಕರಿಗೆ ಆಯೋಜಿಸಿದ್ದ ಔತಣಕೂಟಕ್ಕೆ ಗೃಹ ಸಚಿವ ಪರಮೇಶ್ವರ್ ಗೈರಾಗಿದಕ್ಕೆ ಸಚಿವ ಎಂ.ಬಿ ಪಾಟೀಲ್ ಕಾರಣ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಐದು ವರ್ಷ ಅವಧಿ ಪೂರೈಸಿದ ಅಂಗವಾಗಿ ಪಕ್ಷದ ಶಾಸಕರಿಗೆ ಭೋಜನಾ ವ್ಯವಸ್ಥೆ ಮಾಡಿದ್ದರು. ಪರಮೇಶ್ವರ್‌ ಹೊರತುಪಡಿಸಿ ಎಲ್ಲರೂ ಅದರಲ್ಲಿ ಭಾಗವಹಿಸಿದ್ದರು. ಪರಮೇಶ್ವರ್‌ ಅವರ ಕಡೆಯ ವ್ಯಕ್ತಿಯೊಬ್ಬರು ನಿಧನರಾಗಿದ್ದರು. ಈ ಕಾರಣಕ್ಕಾಗಿ ಅವರು ಔತಣಕೂಟದಲ್ಲಿ ಭಾಗವಹಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಡಿ.ಕೆ.ಶಿವಕುಮಾರ್‌ರವರ ಔತಣಕೂಟಕ್ಕೆ ಸಚಿವ ಸತೀಶ್‌ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭಾಗವಹಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದ್ದರು. ಮತ್ತೆ ಇನ್ನ್ಯಾವ ಬೇಗುದಿ ಇರಲು ಸಾಧ್ಯ. ಕಾಂಗ್ರೆಸ್‌‍ ನಲ್ಲಿ ಯಾವುದೇ ಬೇಗುದಿಯಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಅಧಿವೇಶನ ನಡೆದಾಗ ಸಾಮಾನ್ಯವಾಗಿ ಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಭೋಜನಾ ಕೂಟ ಆಯೋಜಿಸುತ್ತಾರೆ. ನಾನೂ ಕೂಡ ಹಲವು ಬಾರಿ ಭೋಜನಾಕೂಟ ಆಯೋಜಿಸಿದ್ದೇನೆ. ಅದರಲ್ಲಿ ವಿಶೇಷ ಏನಿಲ್ಲ ಎಂದರು.

Key words: Minister, M.B. Patil, Parameshwar, absence, DK Shivakumar, dinner party

The post ಡಿಕೆ ಶಿವಕುಮಾರ್ ಔತಣಕೂಟಕ್ಕೆ ಪರಮೇಶ್ವರ್ ಗೈರಾಗಿದ್ದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಮಗೆ ಗೆಲುವೇ ಮಾನದಂಡ: ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ,ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳ...

സായുധ പ്രതിരോധം ഇസ്രഈലിനെതിരെ ഫലപ്രദമാണെന്ന് തെളിഞ്ഞു: ഹിസ്ബുല്ല

ബെയ്‌റൂട്ട്: ഇസ്രഈലിനെ പ്രതിരോധിക്കാന്‍ ആയുധമെടുക്കുന്നത് ഫലപ്രദമാണെന്ന് തെളിയിക്കപ്പെട്ടെന്ന് ഹിസ്ബുല്ല സെക്രട്ടറി ജനറല്‍...

Notary Portal: "தமிழ்நாடே இல்லையா?" – மத்திய அரசின் நோட்டரி இணையதளத்தில் நிலவும் பெரும் குளறுபடி

பொதுமக்களுக்குச் சட்டப்பூர்வமான ஆவணச் சான்றொப்பம் மற்றும் உறுதிமொழிப் பத்திரங்களை வழங்கும் நோட்டரி...

Andhra Pradesh: ఏపీ ప్రభుత్వం కీలక నిర్ణయం.. వారికి రూ.174 కోట్లు తిరిగి చెల్లింపు

Andhra Pradesh: ఏపీ ప్రభుత్వం తాజాగా టిడ్కో ఇళ్లకు సంబంధించిన కీలక...