27
June, 2026

A News 365Times Venture

27
Saturday
June, 2026

A News 365Times Venture

ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಗುಂಡೇಟು

Date:

 

ಮೈಸೂರು,ಮಾರ್ಚ್,22,2025 (www.justkannada.in):  ಸ್ಥಳ ಮಹಜರು ವೇಳೆ  ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಕಳೆದ ಒಂದೂವರೆ ತಿಂಗಳ ಹಿಂದೆ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿ ಆದರ್ಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.  ದರೋಡೆಕೋರರು ಹಾಡು ಹಗಲೆ ಕಾರು ಅಡ್ಡಗಟ್ಟಿ ಕಾರಿನ ಜೊತೆ ಹಣ ಎಗರಿಸಿದ್ದರು. ಪ್ರಕರಣ ಸಂಭಂದ ಈಗಾಗಲೇ ನಾಲ್ಕು ಜನರನ್ನು ಜಯಪುರ ಪೋಲಿಸರು ಬಂಧಿಸಿ ಜೈಲಿಗಟ್ಟಿದ್ದರು.

ಇನ್ನು ತಲೆ ತಪ್ಪಿಸಿಕೊಂಡಿದ್ದ ಮೂವರು ಆರೋಪಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ದರು.  ನಿನ್ನೆ ಮಂಜಾನೆ ಕೇರಳಾದಲ್ಲಿ ಉಳಿದ ಮೂವರು ಆರೋಪಿಗಳು ಸೆರೆಸಿಕ್ಕಿದ್ದರು. ನಂತರ ಪೊಲೀಸರು ಆರೋಪಿಗಳೊಡನೆ ರಾತ್ರಿ ಸ್ಥಳ ಮಹಜರಿಗೆ ತೆರಳಿದ್ದರು. ಈ ವೇಳೆ ಅರೋಪಿ ಆದರ್ಶ್ ಮೂತ್ರ ವಿಸರ್ಜನೆ ಮಾಡುತ್ತೇನೆ ಎಂದು ಬಿದ್ದಿದ್ದ ಬಿಯರ್ ಬಾಟಲಿಯಿಂದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಎಸ್.ಐ ಕಪಾಳಕ್ಕೆ ಬಾರಿಸಿ ಸಿಬ್ಬಂದಿಗಳನ್ನು ತಳ್ಳಿ ತಪ್ಪಿಸಿಕೊಳ್ಳಲು ಆರೋಪಿ ಆದರ್ಶ್ ಯತ್ನಿಸಿದ್ದಾನೆ.

ಈ ವೇಳೆ ಎಸ್.ಐ ನಿಲ್ಲುವಂತೆ ಕೂಗೂತ್ತ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ನಿಲ್ಲದ ಕಾರಣ  ಆರೋಪಿ ಕಾಲಿಗೆ ಎಸ್.ಐ ಗುಂಡು ಹಾರಿಸಿದರು.  ಹಲ್ಲೆಗೊಳಗಾದ ಪೊಲೀಸರು ಹಾಗೂ ಆರೋಪಿಯನ್ನು ಕೆ.ಆರ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

Key words: Attempt, escape, attacking, police, firing, Accused, mysore

The post ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಗುಂಡೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉറ്റവരും ഉടയരവരും ഏറ്റെടുത്തില്ല; മുന്‍ ആര്‍.എസ്.എസ് പ്രവര്‍ത്തകന്റെ അന്ത്യകര്‍മങ്ങള്‍ ചെയ്ത് ലീഗ് വനിതാ നേതാവ്

കാസര്‍ഗോഡ്: കാന്‍സര്‍ ബാധിച്ച് മരിച്ച മുന്‍ ആര്‍.എസ്.എസ് പ്രവര്‍ത്തകന്റെ അന്ത്യ കര്‍മങ്ങള്‍...

`தமிழ்நாட்டில் தகுதியான பலர் இருக்கையில்..!' – டெல்லி பிரதிநிதி நியமனம்; விளக்கம் கேட்கும் பிரேமலதா!

தமிழ்நாட்டின் டெல்லி சிறப்புப் பிரதிநிதியாக வெங்கட நாராயணாவை நியமித்துள்ளது தமிழ்நாடு அரசு....

Bank Fraud: భారీ బ్యాంకు మోసం.. రూ.3.66 కోట్ల ఇన్సూరెన్స్ పాలసీలను అటాచ్ చేసిన ఈడీ.!

Bank Fraud: బ్యాంకు మోసం కేసులో దర్యాప్తు కొనసాగిస్తున్న ఎన్‌ఫోర్స్‌మెంట్ డైరెక్టరేట్...

ಬಿಡದಿ ಟೌನ್ ಶಿಪ್ ಪರ, ವಿರುದ್ದ ಹೋರಾಟ: HDK ಭೇಟಿ, ಪೊಲೀಸ್‍ ಸರ್ಪಗಾವಲು

ರಾಮನಗರ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ವಿರೋಧಿಸಿ ಒಂದೆಡೆ  ರೈತರ...