21
September, 2026

A News 365Times Venture

21
Monday
September, 2026

A News 365Times Venture

ಮೈಸೂರಿನಲ್ಲಿ ಮಕ್ಕಳಿಗಾಗಿ ‘ಆರ್ಟ್ ಇಂಟ್ರೋ’ ಬೇಸಿಗೆ ಶಿಬಿರ.

Date:

ಮೈಸೂರು,ಮಾರ್ಚ್,31,2025 (www.justkannada.in): ಮೈಸೂರಿನ ಹಾರ್ಡ್ವೀಕ್ ಶಾಲೆ ಆವರಣದಲ್ಲಿರುವ  ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ವತಿಯಿಂದ ಮಕ್ಕಳ ಸೃಜನಶೀಲತೆಗೆ ಉತ್ತೇಜನ ನೀಡುವ ‘ART intro – 2025’ ಬೇಸಿಗೆ ಶಿಬಿರ ನಡೆಯಲಿದೆ.

‘ಆರ್ಟ್ ಇಂಟ್ರೋ’ ಬೇಸಿಗೆ ಶಿಬಿರ ಮಕ್ಕಳನ್ನು ಕಲೆಯ ಪ್ರಪಂಚಕ್ಕೆ ಪರಿಚಯಿಸಿ, ಅವರ ಸೃಜನಶೀಲತೆಯನ್ನು ಉತ್ತೇಜಿಸುವ ವಿಶಿಷ್ಟ ಕಾರ್ಯಕ್ರಮ. ನಾಟಕ, ದೃಶ್ಯಕಲೆ ಮತ್ತು ಸಂಗೀತದ ಮೂಲಕ ಮಕ್ಕಳು ಭಾವನೆಗಳನ್ನು ವ್ಯಕ್ತಪಡಿಸುವುದನ್ನು ಕಲಿಯುತ್ತಾರೆ. ನಾಟಕವು ಆತ್ಮವಿಶ್ವಾಸ ಮತ್ತು ತಂಡದ ಒಗ್ಗೂಡಿಸುವಿಕೆಯನ್ನು ಹೆಚ್ಚಿಸುತ್ತದೆ. ದೃಶ್ಯಕಲೆ ಅವರ ಕಲ್ಪನಾಶಕ್ತಿಯನ್ನು ಪ್ರೇರೇಪಿಸಿ, ಸೂಕ್ಷ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುತ್ತದೆ. ಸಂಗೀತ ಮತ್ತು ಲಯವು ಮಕ್ಕಳ ಭಾಷಾ ಬೆಳವಣಿಗೆಯಲ್ಲಿ ಸಹಾಯ ಮಾಡುತ್ತದೆ. ಈ ಚಟುವಟಿಕೆಗಳು ಕಲೆಯನ್ನು ದಿನನಿತ್ಯದ ಜೀವನದ ಭಾಗವನ್ನಾಗಿ ಪರಿವರ್ತಿಸಲು ಪ್ರೇರೇಪಿಸಿ, ಮಕ್ಕಳಿಗೆ ಹೊಸದನ್ನು ಕಲಿಯುವ ಉತ್ಸಾಹವನ್ನು ನೀಡುತ್ತವೆ. ‘ಆರ್ಟ್ ಇಂಟ್ರೋ’ ಕಲಿಕೆಯ ಮೂಲಕ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

ಈ ಬೇಸಿಗೆ ಶಿಬಿರವೂ ಎರಡು ಬ್ಯಾಚ್‌ಗಳಲ್ಲಿ ನಡೆಯಲಿದೆ. ಬ್ಯಾಚ್ 1: ಏಪ್ರಿಲ್ 14 ರಿಂದ ಮೇ 7, 2025 ಮತ್ತು ಬ್ಯಾಚ್ 2: ಮೇ 8 ರಿಂದ ಮೇ 31, 2025. ಶಿಬಿರದ ಸಮಯ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 4.00. ಭಾನುವಾರ ರಜೆ ಇರುತ್ತದೆ. 8 ವರ್ಷ ಮೇಲ್ಪಟ್ಟ ಮಕ್ಕಳು ಶಿಬಿರಕ್ಕೆ ನೋಂದಾಯಿಸಬಹುದಾಗಿದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು  ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ಬಿ. ರಾಜೇಶ್ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9845605012 / 9945158970

Key words: Art Intro, summer camp, children, Mysore.

The post ಮೈಸೂರಿನಲ್ಲಿ ಮಕ್ಕಳಿಗಾಗಿ ‘ಆರ್ಟ್ ಇಂಟ್ರೋ’ ಬೇಸಿಗೆ ಶಿಬಿರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.പിയില്‍ ബി.ജെ.പി ഭരണത്തില്‍ തകര്‍ത്തത് 151 അബേദ്ക്കര്‍ പ്രതിമകള്‍: അഖിലേഷ് യാദവ്

ലഖ്‌നൗ: ബി.ജെ.പി ഭരണകാലത്ത് ഉത്തര്‍പ്രദേശില്‍ ഡോ. ബി.ആര്‍ അംബേദ്‌റുടെ 151 പ്രതിമകള്‍...

"தமிழ்நாடு, சர்க்கஸ் கும்பலிடம் மாட்டிக்கொண்டிருக்கிறது.!"- உதயநிதி ஸ்டாலின்

சென்னையில் நடைபெற்ற திருமண நிகழ்ச்சியில் எதிர்க்கட்சி தலைவர் உதயநிதி ஸ்டாலின் கலந்துகொண்டிருக்கிறார்....

No UPI-Only Cash: నో యూపీఐ ఓన్లీ క్యాష్.. దుకాణాల ముందు ప్రత్యక్షమవుతున్న బోర్డులు..

ఉత్తరప్రదేశ్‌లోని ఘజియాబాద్‌లో వ్యాపారులు కొత్త నిబంధనలకు వ్యతిరేకంగా వినూత్న నిరసనకు దిగారు....

ഹിന്ദു സംസ്‌കാരത്തെ അപമാനിക്കുന്നതും പാരമ്പര്യത്തെ തകര്‍ക്കുന്നതും; ഹിന്ദു വര്‍ഗീയതയ്‌ക്കെതിരായ ഹാമിദ് അന്‍സാരിയുടെ പരാമര്‍ശത്തിനെതിരെ യോഗി

ന്യൂഡല്‍ഹി: മുന്‍ ഉപരാഷ്ട്രപതി ഹമീദ് അന്‍സാരിയുടെ ‘ഹിന്ദു വര്‍ഗീയത’യുമായി ബന്ധപ്പെട്ട പരാമര്‍ശങ്ങള്‍ക്കെതിരെ...