29
April, 2026

A News 365Times Venture

29
Wednesday
April, 2026

A News 365Times Venture

ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಏಕಲವ್ಯ ಮಾದರಿ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ ಘೋಷಿಸಿದ ಸಿಎಂ

Date:

ಬೆಂಗಳೂರು,ಏಪ್ರಿಲ್, 5,2025 (www.justkannada.in): ಕರ್ನಾಟಕದ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಭ್ಯಸಿಸಿ ರಾಷ್ಟ್ರ ಮಟ್ಟದಲ್ಲಿ  ಪ್ರಥಮ ಸ್ಥಾನ ಪಡೆದ ಮೂವರು ವಿದ್ಯಾರ್ಥಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸನ್ಮಾನಿಸಿ ಬಹುಮಾನ ಘೋಷಿಸಿದರು.

ಎಸ್ ಎಸ್ ಎಲ್ ಸಿ ಯಲ್ಲಿ  ಪ್ರಥಮ ಸ್ಥಾನ ಪಡೆದ ಚಿತ್ರದುರ್ಗ ಜಿಲ್ಲೆಯ ಸಂಜೀವ್ ಮುತ್ತಯ್ಯ (ಶೇ 96.8%) ಇವರಿಗೆ 2 ಲಕ್ಷ ರೂ ಬಹುಮಾನ, ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ  ಪಡೆದ ರಾಯಚೂರು ಜಿಲ್ಲೆಯ ವೀರೇಶ್ ( ಶೇ. 95.16%.)ಗೆ  2 ಲಕ್ಷ ರೂ ಬಹುಮಾನ ಘೋಷಿಸಿದರು

ಲೋಹಿತ್ ನೀಲಪ್ಪ ಶಿನೋಬಿ ಬೆಳಗಾವಿ ಜಿಲ್ಲೆ ವಿಜ್ಞಾನ ವಿಭಾಗದಲ್ಲಿ ಶೇ 95% (ತೃತೀಯ ಸ್ಥಾನ) ಪಡೆದಿದ್ದಾರೆ. ಇವರಿಗೆ ಸಿಎಂ ಸಿದ್ದರಾಮಯ್ಯ ಒಂದು ಲಕ್ಷ ರೂ ಬಹುಮಾನ ಘೋಷಿಸಿದರು.

ರಾಜ್ಯದಲ್ಲಿ ಒಟ್ಟು 12 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿದ್ದು, 2024-25ರಸಾಲಿನಲ್ಲಿ ಒಟ್ಟು 4534 ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದಾರೆ. ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ  ಮಂತ್ರಾಲಯದ ಅಧೀನದಲ್ಲಿ  ಸ್ಥಾಪಿಸಿರುವ  National education society for Tribal students (KESTS) ಮೂಲಕ ಕಾರ್ಯ ನಿರ್ವಹಿಸುತ್ತಿವೆ.

ದೇಶವ್ಯಾಪಿ ಒಟ್ಟು 722 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿದ್ದು, 2024ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳ ವಿವರವನ್ನು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಪ್ರಕಟಿಸಿತು.

ಸಚಿವರಾದ ಸತೀಶ್ ಜಾರಕಿಹೊಳಿ,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಕಾರ್ಯಕ್ರಮದಲ್ಲಿ ಇಲಾಖೆ  ಪರಿಶಿಷ್ಟ ಪಂಗಡಗಳ ಇಲಾಖೆ ಕಾರ್ಯದರ್ಶಿ ರಂದೀಪ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಉಪಸ್ಥಿತರಿದ್ದರು.

Key words: CM, rewards , Eklavya Model Residential School, students, first place

The post ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಏಕಲವ್ಯ ಮಾದರಿ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ ಘೋಷಿಸಿದ ಸಿಎಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

20,000ത്തോളം പേര്‍ക്ക് വോട്ട് ചെയ്യാനാവാത്തത് നിര്‍ഭാഗ്യകരം; പോസ്റ്റല്‍ വോട്ട് നിഷേധത്തില്‍ തെരഞ്ഞെടുപ്പ് കമ്മീഷനെതിരെ ഹൈക്കോടതി

കൊച്ചി: തെരഞ്ഞെടുപ്പ് ഡ്യൂട്ടിലുണ്ടായിരുന്ന ഉദ്യോഗസ്ഥര്‍ക്ക് പോസ്റ്റല്‍ വോട്ട് നിഷേധിച്ചതില്‍ തെരഞ്ഞെടുപ്പ് കമ്മീഷനെതിരെ...

“சோசலிச புரட்சிபோல, தமிழ்நாட்டில் 'விசில் புரட்சி' ஏற்படப் போகிறது!"- செங்கோட்டையன்

திண்டுக்கல் மாவட்டம் பழனிக்கு வருகை தந்த தமிழக வெற்றிக் கழகத்தின் தலைமை...

Dacoit: ఓటీటీలోకి అడివి శేష్ ‘డెకాయిట్’.. స్ట్రీమింగ్ డేట్ ఫిక్స్!

టాలీవుడ్ యంగ్ అండ్ టాలెంటెడ్ హీరో అడివి శేష్, మృణాల్ ఠాకూర్...

ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ- ಸಂಸದ ಗೋವಿಂದ ಕಾರಜೋಳ

ಬಾಗಲಕೋಟೆ,ಏಪ್ರಿಲ್,28,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ  ಚರ್ಚೆಯಾಗುತ್ತಿದ್ದು ಇದೀಗ...