26
March, 2026

A News 365Times Venture

26
Thursday
March, 2026

A News 365Times Venture

ಲಾರಿ ಮಾಲೀಕರ ಜೊತೆ ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಸಕ್ಸಸ್​: ಮುಷ್ಕರ ವಾಪಸ್​

Date:

ಬೆಂಗಳೂರು, ಏಪ್ರಿಲ್​ 17,2025 (www.justkannada.in):  ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಮೂರನೇ ಸುತ್ತಿನ ಸಭೆ ಯಶಸ್ವಿಯಾಗಿದ್ದು ಮುಷ್ಕರ ಕೈಬಿಡಲು ಲಾರಿ ಮಾಲೀಕರ ಸಂಘ ತೀರ್ಮಾನಿಸಿದೆ.

ಡಿಸೆಲ್ ಬೆಲೆ ಇಳಿಕೆ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದರು. ನಿನ್ನೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ನಂತರ ಸಿಎಂ ಸಿದ್ದರಾಮಯ್ಯ ಇಬ್ಬರು ಸಭೆ ನಡೆಸಿದ್ದರು. ಆದರೆ ಎರಡು ಸಭೆ ವಿಫಲವಾಗಿತ್ತು.

ಇಂದು ಮತ್ತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸಭೆ ನಡೆಸಿ ಚರ್ಚಿಸಿದ್ದು ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಅವರು, ಸಚಿವರು ಬಹುತೇಕ ಬೇಡಿಕೆ ಈಡೇರಿಸಿದ್ದಾರೆ. ಸಚಿವರಿಗೆ ಧನ್ಯವಾದ ತಿಳಿಸುತ್ತೇನೆ. ಮುಷ್ಕರ ಈ ಸಮಯದಿಂದಲೇ ವಾಪಸ್ ಪಡೆಯುತ್ತೇನೆ ಎಂದು ಘೋಷಣೆ ಮಾಡಿದರು.

20 ವರ್ಷಗಳಲ್ಲಿ ಈಡೇರದ ಬೇಡಿಕೆ ಸಚಿವ ರಾಮಲಿಂಗಾ ರೆಡ್ಡಿ ಈಡೇರಿಸಿದ್ದಾರೆ. ಲಾರಿ ಮುಷ್ಕರದಿಂದ ಆದ ತೊಂದರೆಗೆ ಜನರಲ್ಲಿ ವಿಷಾದ ವ್ಯಕ್ತಪಡಿಸಿದ್ದೇನೆ. ಒಂದು ದಿನದ ಲಾರಿ ಮುಷ್ಕರದಿಂದ 4500 ಕೋಟಿ ರುಪಾಯಿ ನಷ್ಟವಾಗಿದೆ. ಜಿ.ಆರ್. ಷಣ್ಮುಗಪ್ಪ ಹೇಳಿದ್ದಾರೆ.

Key words: Minister, Ramalingareddy, lorry owners, meeting

The post ಲಾರಿ ಮಾಲೀಕರ ಜೊತೆ ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಸಕ್ಸಸ್​: ಮುಷ್ಕರ ವಾಪಸ್​ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

KSOU ನಲ್ಲಿ ಲಂಚ-ಭ್ರಷ್ಟಾಚಾರ: ಬ್ಯಾಂಕ್ ಖಾತೆಗಳು ಸ್ಥಗಿತಕ್ಕೆ ಸರ್ಕಾರದ ಆದೇಶ

  ಬೆಂಗಳೂರು,March.25,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU)ದಲ್ಲಿ ಲಂಚ ಹಾಗೂ...

ബി.ജെ.പിയുടെ ബി ടീമല്ല, മുസ്‌ലിം ശാക്തീകരണത്തിന്റെ എം ടീം; ബംഗാളില്‍ മമതയ്‌ക്കെതിരെ പോരിന് ഒവൈസി

കൊല്‍ക്കത്ത: പശ്ചിമ ബംഗാള്‍ നിയമസഭാ തെരഞ്ഞെടുപ്പിന് മുന്നോടിയായി ഭരണകക്ഷിയായ തൃണമൂല്‍ കോണ്‍ഗ്രസിനെതിരെ...

Punjab Kings: ఈ సారి ఎలాగైనా ట్రోఫీ గెలవాల్సిందే.. స్పెషల్ పూజలు చేసిన ‘పంజాబ్ కింగ్స్’ టీం..!

Punjab Kings: ఈ సారి ఎలాగైనా ట్రోఫీని గెలవాల్సిందే అన్నట్లుగా పంజాబ్...