23
March, 2026

A News 365Times Venture

23
Monday
March, 2026

A News 365Times Venture

ಕರ್ನಾಟಕದ 3 ಜಿಲ್ಲೆಗಳು ಸೇರಿ ದೇಶಾದ್ಯಂತ ನಾಳೆ ಮಾಕ್ ಡ್ರಿಲ್

Date:

ಬೆಂಗಳೂರು, ಮೇ ,6,2025 (www.justkannada.in): ಜಮ್ಮುಕಾಶ್ಮೀರದ  ಪಹಲ್ಗಾಮ್​ ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮುಂದಾಗಿದ್ದು, ಪಾಕಿಸ್ತಾನದ ವಿರುದ್ದ ಈಗಾಗಲೇ ಹಲವು ಕಠಿಣ ನಿರ್ಧಾರಗಳನ್ನ ಕೈಗೊಂಡಿದೆ. ಇದೀಗ ಭಾರತ ಮತ್ತು ಪಾಕ್ ನಡುವೆ ಯುದ್ದದ ಕಾರ್ಮೋಡ ಕವಿದಿದ್ದು,  ಇದಕ್ಕಾಗಿಯೇ ಭಾರತೀಯ ಸೇನೆ ಭರ್ಜರಿ ತಾಲೀಮು ನಡೆಸಿದೆ. ಈ ಮಧ್ಯೆ ಇದೀಗ  ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ.

ಕೇಂದ್ರ ಗೃಹ ಸಚಿವಾಲಯವು ಮೇ 7 ರಂದು 244 ಜಿಲ್ಲೆಗಳಲ್ಲಿ “ಪರಿಣಾಮಕಾರಿ ನಾಗರಿಕ ರಕ್ಷಣೆ” ಅಣಕು ಅಭ್ಯಾಸಗಳನ್ನು ನಡೆಸಲು ಆದೇಶಿಸಿದೆ. ದೆಹಲಿ, ಉತ್ತರ ಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳ, ಕರ್ನಾಟಕ ಸೇರಿದಂತೆ ರಾಜ್ಯಗಳಲ್ಲಿ ನಾಳೆ  ರಾಷ್ಟ್ರವ್ಯಾಪಿ  ಮಾಕ್ ಡ್ರಿಲ್ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ

ಇತ್ತ ಕರ್ನಾಟಕದಲ್ಲಿ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್​ ಡ್ರಿಲ್​ ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು, ಕಾರವಾರ, ರಾಯಚೂರಿನಲ್ಲಿ ನಾಳೆ ಸಂಜೆ 4 ಗಂಟೆ ಮಾಕ್​  ಡ್ರಿಲ್ ​ಗೆ ನಿರ್ಧಾರ ಮಾಡಿದ್ದೇವೆ. ಈ ಕುರಿತಾಗಿ ಈಗಾಗಲೇ ಅಗ್ನಿಶಾಮಕದಳ, ಸಿವಿಲ್ ಡಿಫೆನ್ಸ್ ಅಧಿಕಾರಿಗಳ ಜತೆ ಸಭೆ ಮಾಡಲಾಗಿದೆ‌ ಎಂದು ತಿಳಿಸಿದ್ದಾರೆ.

ಬೆಂಗಳೂರಿನ 35 ಕಡೆ ಸೈರನ್​ ಇದ್ದು, 32 ಕಡೆ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ ಸೈರನ್​ ಕಾರ್ಯ ನಿರ್ವಹಿಸುವ ಕಡೆ ಮಾಕ್ ​ಡ್ರಿಲ್​ ನಡೆಯಲಿದೆ.

Key words: Mock drill, tomorrow,  across ,country –

The post ಕರ್ನಾಟಕದ 3 ಜಿಲ್ಲೆಗಳು ಸೇರಿ ದೇಶಾದ್ಯಂತ ನಾಳೆ ಮಾಕ್ ಡ್ರಿಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മോദി പൂര്‍ണ പരാജയം; പശ്ചിമേഷ്യന്‍ സംഘര്‍ഷം പ്രതീക്ഷിച്ചിട്ടും ക്രമീകരണങ്ങള്‍ നടത്തിയില്ല; ഭാരം ജനങ്ങളുടെ തലയിലിട്ടു: കെജ്‌രിവാള്‍

ന്യൂദല്‍ഹി: പശ്ചിമേഷ്യയിലെ സംഘര്‍ഷം കാരണമുണ്ടായ പ്രതിസന്ധി കൈകാര്യം ചെയ്യുന്നതില്‍ നരേന്ദ്ര മോദിയുടെ...

தஞ்சை: விஜய் வாகனத்தைப் பின்தொடர்ந்ததில் விபத்து: சிகிச்சையில் இருந்த கல்லுாரி மாணவர் பலி

தஞ்சாவூர் செங்கிப்பட்டி அருகே உள்ள அய்யாசாமிப்பட்டியில், கடந்த 4ம் தேதி, தமிழக...

Coca‑Cola Price: యుద్ధం ఎఫెక్ట్.. పెరగనున్న కోకా కోలా ధరలు..

భారతదేశంలో కోకా కోలా ఉత్పత్తులను బాటిలింగ్  చేసే ప్రధాన సంస్థ ఎస్ఎల్ఎంజీ...

ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ,ಮಾರ್ಚ್,23,2026 (www.justkannada.in): ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು...