18
March, 2026

A News 365Times Venture

18
Wednesday
March, 2026

A News 365Times Venture

ಬೀದಿಬದಿ ಆಹಾರ ಸೇವನೆ ಬಿಡಿ: ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ- ಪಾಲಿಕೆ ಆರೋಗ್ಯಧಿಕಾರಿ ಸಲಹೆ

Date:

ಮೈಸೂರು,ಮೇ,31,2025 (www.justkannada.in): ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ. ಆರೋಗ್ಯದ ದೃಷ್ಟಿಯಿಂದ ಬೀದಿಬದಿ ಆಹಾರ ಸೇವಿಸಬೇಡಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಧಿಕಾರಿ ಡಾ. ವೆಂಕಟೇಶ್ ಸಲಹೆ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರೋಗ್ಯಧಿಕಾರಿ ಡಾ. ವೆಂಕಟೇಶ್, ಈ ಬಾರಿ ಮೈಸೂರಿಗೆ ಉತ್ತಮ ಮಳೆಯಾಗಿದೆ. ಮಳೆಯ ನೀರಿನಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಜೂನ್ ತಿಂಗಳಲ್ಲಿ ಮಾರಣಾಂತಿಕ ಕಾಯಿಲೆ ಬರುವ ಸಾಧ್ಯತೆಗಳಿವೆ. ನಿಂತ ನೀರಿನಿಂದ ಸೊಳ್ಳೆಗಳ ಸಂತಾನ ಹೆಚ್ಚಾಗಲಿವೆ. ಆದ್ದರಿಂದ ನಾಗರೀಕರು  ಸೊಳ್ಳೆ ಬಾರದ ಹಾಗೆ ಎಚ್ಚರವಹಿಸಿ , ಸ್ವಚ್ಛತೆ ಕಾಪಾಡಿಕೊಳ್ಳಬೇಕು.  ಸದ್ಯ ಕೋವಿಡ್ ಬಗ್ಗೆ ಭಯ ಪಡೋದು ಬೇಡ. ನಾಗರೀಕರು ಎಲ್ಲೆಂದರಲ್ಲಿ ಕಸ ಬೀದಿಗೆ ಹಾಕಬಾರದು. ರಾತ್ರಿ ವೇಳೆ ಬೀದಿಬದಿ ವ್ಯಾಪಾರಸ್ಥರು ಹೆಚ್ಚಾಗಿ ಕಸ ಹಾಕುತ್ತಿದ್ದಾರೆ. ಬಿಸಾಕಿದ ಕಸ ಮಳೆ ನೀರಿಗೆ ಸಿಲುಕಿ ಚರಂಡಿಗೆ ಸೇರಿಕೊಳ್ಳುತ್ತದೆ. ಇದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ತೆರಳಲು ಸಾಧ್ಯವಾಗೋದಿಲ್ಲ. ನಮ್ಮೊಂದಿಗೆ ನಗರದ ಜನರು ಸಹಕರಿಸಿ ಎಂದು ಮನವಿ ಮಾಡಿದರು.vtu

ಕಸದ ಸಮಸ್ಯೆ ಇದ್ದರೆ ಪಾಲಿಕೆಗೆ ಒಂದೇ ಒಂದು ಕಾಲ್ ಮಾಡಿ. ಆರೋಗ್ಯದ ದೃಷ್ಟಿಯಿಂದ ಬೀದಿಬದಿ ಆಹಾರ ಸೇವಿಸಬೇಡಿ. ಕಸದ ಸಮಸ್ಯೆ ಎದುರಿಸಲು ನಮ್ಮ ತಂಡ ಸಜ್ಜಾಗಿದೆ. ಕಸ ಕಂಡಲ್ಲಿ ಒಂದೇ ಒಂದು ಫೋಟೋ ಅಥವಾ ಕಾಲ್ ಮಾಡಿ ಮಾಹಿತಿ ನೀಡಿ. ಕೇವಲ ಒಂದೇ ಗಂಟೆಯಲ್ಲೇ ಸಮಸ್ಯೆ ಸರಿಪಡಿಸುತ್ತೇವೆ. ಎಲ್ಲೆಂದರಲ್ಲಿ ಕಸ ಬಿಸಾಕುವವರಿಗೆ ದಂಡ ಹಾಕುತ್ತಿದ್ದೇವೆ. ಕೆಲವು ಗಂಭೀರ ಪ್ರಕರಣವಿದ್ದರೆ ಎಫ್ ಐಆರ್  ಅನ್ನು ದಾಖಲಿಸುತ್ತೇವೆ ಎಂದು ಪಾಲಿಕೆ ಅರೋಗ್ಯಧಿಕಾರಿ ಡಾ ವೆಂಕಟೇಶ್ ಹೇಳಿದರು.

Key words: Protect, health, from, mosquitoes, MCC, health officer

The post ಬೀದಿಬದಿ ಆಹಾರ ಸೇವನೆ ಬಿಡಿ: ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ- ಪಾಲಿಕೆ ಆರೋಗ್ಯಧಿಕಾರಿ ಸಲಹೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ

ಬೆಂಗಳೂರು,ಮಾರ್ಚ್,17,2026 (www.justkannada.in):  ಸಚಿವ ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ...

ദത്തെടുത്ത അമ്മമാരുടെ പ്രസവാവധി; കുട്ടിയുടെ പ്രായം പരിഗണിക്കേണ്ടതില്ലെന്ന് സുപ്രീം കോടതി

ന്യൂദൽഹി: ദത്തെടുത്ത അമ്മമാരുടെ പ്രസവാവധിക്ക് കുട്ടിയുടെ പ്രായം പരിഗണിക്കേണ്ടതില്ലെന്ന് സുപ്രീം കോടതി....

Iftar Dinner: నేడు ముస్లిం సోదరులకు వైసీపీ ఇఫ్తార్ విందు.. పాల్గొననున్న మాజీ సీఎం వైఎస్ జగన్!

పవిత్ర రంజాన్‌ మాసాన్ని పురస్కరించుకుని ముస్లిం సోదరులకు బుధవారం వైఎస్సార్‌సీపీ ఇఫ్తార్‌...