ಬೆಂಗಳೂರು, ಜೂನ್ ,10,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಿಂದ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಿದ್ದು ಈ ಮಧ್ಯೆ ಈ ಕುರಿತು ವಿವರ ಪಡೆಯಲು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಇಂದು ಸಭೆ ನಡೆಸಲಿದೆ.
ಇದೀಗ ವರಿಷ್ಠರ ಬುಲಾವ್ ಬೆನ್ನಲ್ಲೇ ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಕಾಲ್ತುಳಿತ ಪ್ರಕರಣದಿಂದ ಸರ್ಕಾರದ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿದೆ ಎನ್ನಲಾಗಿದ್ದು, ಘಟನೆ ನಡೆದ ದಿನವೇ ಪ್ರಾಥಮಿಕ ಮಾಹಿತಿ ಪಡೆದಿದ್ದ ವರಿಷ್ಠರು, ಈಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ಹೈಕಮಾಂಡ್ ಜೊತೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಭೆ ವೇಳೆ ಪಕ್ಷ ಸಂಘಟನೆ ಸಂಪುಟ ಪುನರ್ ರಚನೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ವೇಳೆ ವಿಧಾನ ಪರಿಷತ್ ನಾಮ ನಿರ್ದೇಶನದ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಇದೆ.
Key words: CM Siddaramaiah, DCM, DK Shivakumar, Delhi, high command
The post ಹೈಕಮಾಂಡ್ ಜೊತೆ ಸಭೆಗಾಗಿ ದೆಹಲಿಗೆ ಹಾರಿದ ಸಿಎಂ ಮತ್ತು ಡಿಸಿಎಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





