19
June, 2026

A News 365Times Venture

19
Friday
June, 2026

A News 365Times Venture

ಹೊಸದಾಗಿ ನಡೆಯುವ ಜಾತಿಗಣತಿಗೆ ಎಲ್ಲರೂ ಸಹಕಾರ ನೀಡಿ- ಡಿಸಿಎಂ ಡಿಕೆ ಶಿವಕುಮಾರ್

Date:

ನವದೆಹಲಿ,ಜೂನ್,10,2025 (www.justkannada.in): ಜಾತಿಗಣತಿಗೆ ಅಪಸ್ವರಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹೊಸದಾಗಿ ಜಾತಿಗಣತಿ  ಸಮೀಕ್ಷೆಗೆ ಹೈಕಮಾಂಡ್ ಸೂಚಿಸಿದೆ. ಹೀಗಾಗಿ ಹೊಸದಾಗಿ ನಡೆಯುವ ಜಾತಿಗಣತಿಗೆ ಎಲ್ಲರೂ ಸಹಕಾರ ನೀಡಿ ಎಂದು  ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.

ಇಂದು ಹೈಕಮಾಂಡ್ ಜೊತೆ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಜೂನ್ 12ರಂದು ಜಾತಿಗಣತಿ ವರದಿ ಬಗ್ಗೆ ತೀರ್ಮಾನ ಮಾಡಲು ನಿಗದಿ ಆಗಿತ್ತು. ಜಾತಿಗಣತಿ ಬಗ್ಗೆ ಚರ್ಚಿಸಲು ವಿಶೇಷ ಸಂಪುಟ ಕರೆಯಲಾಗಿತ್ತು. ಜಾತಿಗಣತಿ ಬಗ್ಗೆ ಅನೇಕ ಮಠಾಧೀಶರು ವರಿಷ್ಠರನ್ನು ಭೇಟಿಯಾಗಿ ಸಂಖ್ಯೆಯ ‌ಬಗ್ಗೆ ಆಕ್ಷೇಪ ಇದೆ ಅಂತಾ ಕೆಲವರು ಹೇಳಿದ್ದರು. ಹೀಗಾಗಿ  ಅಪಸ್ವರ ಬರಬಾರದೆಂಬ ಉದ್ದೇಶದಿಂದ ಮತ್ತೆ ಜಾತಿಗಣತಿಗೆ ಸಲಹೆ ನೀಡಿದ್ದಾರೆ.  ಅದ್ದರಿಂದ ಮತ್ತೆ ಜಾತಿಗಣತಿ ಸಮೀಕ್ಷೆ ಮಾಡಲು ತೀರ್ಮಾನಿಸಿದ್ದೇವೆ. ಹೊಸದಾಗಿ ನಡೆಯುವ ಜಾತಿಗಣತಿಗೆ ಎಲ್ಲರೂ ಸಹಕಾರ ನೀಡಿ ಎಂದರು.

ನಮ್ಮ ಸರ್ಕಾರದ ಬಗ್ಗೆ ಯಾರಿಗೂ ಆತಂಕ ಬೇಡ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮೀಕ್ಷೆ ಮಾಡಲಿದ್ದೇವೆ. ಯಾವಾಗ ಸಮೀಕ್ಷೆ ಎಂದು ಸಂಪುಟ ಸಭೆ ಮಾಡಿ ಸಿಎಂ ತಿಳಿಸುತ್ತಾರೆ. ಆನ್​​ಲೈನ್​ ಮೂಲಕವೂ ಮಾಹಿತಿ ನೀಡಲು ಅವಕಾಶ ನೀಡುತ್ತೇವೆ. ಅಪಸ್ವರ ಕೇಳಿ ಬಂದಿರುವುದಿಂದ ಮತ್ತೆ ಸಮೀಕ್ಷೆಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.vtu

Key words: Everyone,  cooperate, new, caste census, DCM, DK Shivakumar

The post ಹೊಸದಾಗಿ ನಡೆಯುವ ಜಾತಿಗಣತಿಗೆ ಎಲ್ಲರೂ ಸಹಕಾರ ನೀಡಿ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നീറ്റ് ക്രമക്കേട്; ആത്മഹത്യ ചെയ്ത കുട്ടികളുടെ കുടുംബങ്ങള്‍ക്ക് ഒരു കോടി രൂപ നഷ്ടപരിഹാരം നല്‍കണം: മോദിക്ക് തുറന്ന കത്തുമായി സി.ജെ.പി

ന്യൂദല്‍ഹി: പ്രധാനമന്ത്രി നരേന്ദ്ര മോദിക്ക് തുറന്ന കത്തുമായി കോക്രോച്ച് ജനതാ പാര്‍ട്ടി...

நிறுத்தப்பட்ட சட்டமன்ற ஒளிபரப்பு: "முழு நேரலை..முழு நேரலை…அத்தனையும் உருட்டா சார்! – அதிமுக கேள்வி

தமிழக சட்டமன்றத்தின் 2-வது கூட்டத்தொடர் இன்று (ஜூன்.19) நடைபெற்றது. மேகதாது விவகாரத்தில்...

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ...