28
August, 2026

A News 365Times Venture

28
Friday
August, 2026

A News 365Times Venture

ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ

Date:

ಕಲಬುರುಗಿ,ಜೂನ್,13,2025 (www.justkannada.in):  ನಿನ್ನೆ ಅಹಮದಾಬಾದ್ ನ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನವಾಗಿ 241 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡುವಂತೆ  ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ,  ಕೇಂದ್ರ ಸರ್ಕಾರ ವಿಮಾನ ದುರಂತದ ಘಟನೆ ಹೊಣೆ ಹೊರಬೇಕು. ವಿಮಾನಯಾನ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇಂತಹ ದುರಂತ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆ ವರದಿ ಜನರ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಕಾಲ್ತುಳಿತ ಘಟನೆ ಆದಾಗ ಬಿಜೆಪಿಯವರು ಸಿಎಂ, ಡಿಸಿಎಂ ರಾಜೀನಾಮೆ ಕೇಳುತ್ತಿದ್ದರು. ಆದರೆ ಕುಂಭಮೇಳ , ಪಹಲ್ಗಾಮ್ ಘಟನೆಯಲ್ಲಿ ರಾಜೀನಾಮೆ ಕೊಟ್ಟರಾ? ಸಾವಿನಲ್ಲಿ ಯಾರೂ ರಾಜಕೀಯ ಮಾಡಬಾರದು. ಟಾಟಾ ಗ್ರೂಪ್ ಮೃತ ಕುಟುಂಬಸ್ಥರಿಗೆ ಒಂದು ಕೋಟಿ ಪರಿಹಾರ ನೀಡಿದೆ. ಆದರೆ ಈ ಪರಿವಾರದವರಿಗೆ ಎಷ್ಟು ಕೋಟಿ ಕೊಟ್ಟರು ಕಡಿಮೆಯೇ ನಿರ್ವಹಣೆ ಮಾಡುವ ಡಿಜಿಸಿಎ ವಿಮಾನಯಾನ ಮಂತ್ರಿ ಏನು ಮಾಡುತ್ತಿದ್ದರು ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿರ್ಲಕ್ಷ ವಹಿಸಿದ ಎಲ್ಲರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.vtu

Key words: Plane crash, Ishwar Khandre, demands, resignation, Union Aviation Minister

The post ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഫലസ്തീന്‍ ആക്ഷനെ യു.എസ് ഭീകര പട്ടികയില്‍ ഉള്‍പ്പെടുത്തി; നിരോധനം നീക്കാന്‍ ബ്രിട്ടിഷ് പ്രധാനമന്ത്രിക്ക് കത്ത്‌

വാഷിങ്ടണ്‍: ബ്രിട്ടണ്‍ ആസ്ഥാനമായി പ്രവര്‍ത്തിക്കുന്ന ഫലസ്തീന്‍ അവകാശ സംഘടനയായ ഫലസ്തീന്‍ ആക്ഷനെ...

`அரசுக்கு திமுக பஞ்சபாண்டவர்களாக துணை நிற்கும்!' – புதுச்சேரி எதிர்க்கட்சித் தலைவர் நாஜிம்

புதுச்சேரி சட்டப்பேரவையில் கவர்னர் உரைக்கு நன்றி தெரிவிக்கும் தீர்மானத்தின் மீது பேசிய...

PMSBY: రూ.20తో రూ.2 లక్షల బీమా.. ఈ ప్రభుత్వ పథకం గురించి తెలుసా?

PMSBY: సాధారణంగా బీమా పాలసీ తీసుకోవాలంటే ప్రతి ఏడాది భారీ మొత్తంలో...

ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರುಗಿ,ಆಗಸ್ಟ್,27,2026 (www.justkannada.in): ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ...