13
March, 2026

A News 365Times Venture

13
Friday
March, 2026

A News 365Times Venture

ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ

Date:

ಕಲಬುರುಗಿ,ಜೂನ್,13,2025 (www.justkannada.in):  ನಿನ್ನೆ ಅಹಮದಾಬಾದ್ ನ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನವಾಗಿ 241 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡುವಂತೆ  ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ,  ಕೇಂದ್ರ ಸರ್ಕಾರ ವಿಮಾನ ದುರಂತದ ಘಟನೆ ಹೊಣೆ ಹೊರಬೇಕು. ವಿಮಾನಯಾನ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇಂತಹ ದುರಂತ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆ ವರದಿ ಜನರ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಕಾಲ್ತುಳಿತ ಘಟನೆ ಆದಾಗ ಬಿಜೆಪಿಯವರು ಸಿಎಂ, ಡಿಸಿಎಂ ರಾಜೀನಾಮೆ ಕೇಳುತ್ತಿದ್ದರು. ಆದರೆ ಕುಂಭಮೇಳ , ಪಹಲ್ಗಾಮ್ ಘಟನೆಯಲ್ಲಿ ರಾಜೀನಾಮೆ ಕೊಟ್ಟರಾ? ಸಾವಿನಲ್ಲಿ ಯಾರೂ ರಾಜಕೀಯ ಮಾಡಬಾರದು. ಟಾಟಾ ಗ್ರೂಪ್ ಮೃತ ಕುಟುಂಬಸ್ಥರಿಗೆ ಒಂದು ಕೋಟಿ ಪರಿಹಾರ ನೀಡಿದೆ. ಆದರೆ ಈ ಪರಿವಾರದವರಿಗೆ ಎಷ್ಟು ಕೋಟಿ ಕೊಟ್ಟರು ಕಡಿಮೆಯೇ ನಿರ್ವಹಣೆ ಮಾಡುವ ಡಿಜಿಸಿಎ ವಿಮಾನಯಾನ ಮಂತ್ರಿ ಏನು ಮಾಡುತ್ತಿದ್ದರು ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿರ್ಲಕ್ಷ ವಹಿಸಿದ ಎಲ್ಲರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.vtu

Key words: Plane crash, Ishwar Khandre, demands, resignation, Union Aviation Minister

The post ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾರಂಟಿ ಯೋಜನೆ ಹಿಂಪಡೆಯಿರಿ ಎಂದು ಬಿಜೆಪಿ ನಿರ್ಣಯ ಮಂಡಿಸಲಿ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು

ಬೆಂಗಳೂರು,ಮಾರ್ಚ್,13,2026 (www.justkannada.in): ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲನೆ ಮಾಡಿ ಅಥವಾ ಹಿಂಪಡೆಯಿರಿ...

ഭീകര സംഘടനകൾക്ക് ഇൻഷുറൻസ് പോളിസികൾ നൽകാൻ ഉദ്ദേശിക്കുന്നില്ല: നെതന്യാഹു

ടെൽ അവീവ്: ഇറാന്റെ പുതിയ പരമോന്നത നേതാവിനെതിരെ പരോക്ഷ ഭീഷണിയുമായി ഇസ്രഈൽ...

ஈரான் தாக்குகிறதுதான்; ஆனாலும், மோதாமல் 'சைலன்ட்டாக' இருக்கும் வளைகுடா நாடுகள் – என்ன காரணம்?

ஈரான் மீது போர் தொடுத்தது என்னவோ அமெரிக்காவும், இஸ்ரேலும் தான். ஆனால்,...