26
June, 2026

A News 365Times Venture

26
Friday
June, 2026

A News 365Times Venture

ವಿಮಾನ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ, 3 ತಿಂಗಳಲ್ಲಿ ವರದಿ-ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು

Date:

ನವದೆಹಲಿ,ಜೂನ್,14,2025 (www.justkannada.in):  ಗುಜರಾತ್ ನ ಅಹಮದಾಬಾದ್ ನ ಮೇಘಾಶಿ ನಗರದಲ್ಲಿ  ನಡೆದ ವಿಮಾನ ಪತನ ದುರಂತ ಕುರಿತು ಉನ್ನತ ಮಟ್ಟದ ತನಿಖೆ ನಡೆಯಲಿದ್ದು 3 ತಿಂಗಳಲ್ಲಿ ವರದಿ ಬರಲಿದೆ ಎಂದು ಕೇಂದ್ರ ವಿಮಾನಯಾನ ಇಲಾಖೆ ಸಚಿವ ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ.

ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸ ಮಾಹಿತಿ ನೀಡಿದ ಕೇಂದ್ರ ವಿಮಾನಯಾನ ಇಲಾಖೆ ಸಚಿವ ರಾಮ್ ಮೋಹನ್ ನಾಯ್ಡು, ಡ್ರೀಮ್ ಲೈನರ್ ವಿಮಾನದಲ್ಲಿ ಭದ್ರತಾ ಕ್ರಮಗಳ ಬಗ್ಗೆ ಪರಿಶೀಲನೆ  ನಡೆಸಲಾಗುತ್ತಿದೆ. ಬೋಯಿಂಗ್ 787 ವಿಮಾನಗಳಲ್ಲಿ ಭದ್ರತೆ ಪರಿಶೀಲನೆ ನಡೆಸಲಾಗುತ್ತಿದೆ.  ಕೇಂದ್ರ ಗೃಹ ಸಚಿವಾಲಯದ ಉಸ್ತುವಾರಿಯಲ್ಲಿ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ಎಐ ವಿಮಾನ ದುರಂತದ ಬಗ್ಗೆ ಮೂರು ತಿಂಗಳಲ್ಲಿ ವರದಿ ಬರಲಿದೆ. ಘಟನೆಯಲ್ಲಿ ಮೃತಪಟ್ಟವರ ಡಿಎನ್ ಎ ಪರೀಕ್ಷೆ ನಡೆಸಿ ಶವಗಳನ್ನ ಕುಟುಂಬಸ್ಥರಿಗೆ ನೀಡಲಾಗುತ್ತಿದೆ ಎಂದರು.

ಕಳೆದ 2 ದಿನದಿಂದ ಬಹಳ ಕಠಿಣ ಪರಿಸ್ಥಿತಿಯನ್ನ ಎದುರಿಸುತ್ತಿದ್ದೇವೆ. ರಸ್ತೆ ಅಪಘಾತದಲ್ಲೇ ನಾನು ತಂದೆಯನ್ನ ಕಳೆದುಕೊಂಡಿದ್ದೇನೆ.  ತಮ್ಮವರನ್ನ ಕಳೆದುಕೊಂಡ ನೋವನ್ನ ನಾನೂ ಅನುಭವಿಸಿದ್ದೇನೆ.  ರಕ್ಷಣಾ ತಂಡಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಕೆಲಸ ನಡೆಸಿವೆ  ದುರಂತ ಸಂಭವಿಸಿದ ಸ್ಥಳದಲ್ಲಿ ಈಗಾಗಲೇ ತನಿಖೆ ಆರಂಭವಾಗಿದೆ. ತಾಂತ್ರಿಕ ಸಮಿತಿಯ  ತನಿಖೆ ನಂತರ ನಿಖರ ಕಾರಣ ತಿಳಿದು ಬರಲಿದೆ ಎಂದು ರಾಮ್ ಮೋಹನ್ ನಾಯ್ಡು ತಿಳಿಸಿದರು.vtu

Key words: plane, crash, Ahmedabad, investigation, report, Union Minister, Ram Mohan Naidu

The post ವಿಮಾನ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ, 3 ತಿಂಗಳಲ್ಲಿ ವರದಿ-ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Benefits of Hugging: భార్యాభర్తలు కౌగిలించుకుని నిద్రపోతే కలిగే అద్భుత ప్రయోజనాలు ఇవే.!

Benefits of Hugging: ప్రస్తుత ఆధునిక జీవితంలో పనిఒత్తిడి, కుటుంబ బాధ్యతలు,...

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ...

മയക്കുമരുന്ന് വരുന്നത് അദാനി തുറമുഖങ്ങള്‍ വഴി; അവര്‍ക്കെതിരെ നടപടിയെടുക്കാന്‍ പറ്റാത്തവരാണ് തൂഫാന്‍ കൊണ്ടുവരുന്നതെന്ന് കെ. സഹദേവന്‍

കൊച്ചി: രാജ്യത്തേക്ക് മയക്കുമരുന്ന് കടന്നു വരുന്നത് ഗൗതം അദാനിയുടെ കീഴിലുള്ള തുറമുഖങ്ങള്‍...

வெனிசுலாவை உலுக்கிய இரட்டை பூகம்பம்; இடிந்து விழுந்த கட்டடங்கள்… கதறி அழும் மக்கள் | Photo Album

Venezuela Earthquakes: நிலநடுக்கத்தை போன் மூலம் முன்கூட்டியே அறியலாமா? கூகுள் தரும்...