12
March, 2026

A News 365Times Venture

12
Thursday
March, 2026

A News 365Times Venture

ರಾಜ್ಯ  ಪಡಿತರ ಚೀಟಿದಾರರಿಗೆ ‘ಆಹಾರದ ಕಿಟ್’ ನೀಡಲು ಸರ್ಕಾರ ಚಿಂತನೆ

Date:

ಬೆಂಗಳೂರು,ಜೂನ್,24,2025 (www.justkannada.in):  ರಾಜ್ಯದ ಪಡಿತರ ಚೀಟಿದಾರರಿಗೆ ನೀಡಲಾಗುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಹೌದು. ಕಾಂಗ್ರೆಸ್ ಚುನಾವಣೆಗೂ ಮುನ್ನ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಬಂದ ನಂತರ  ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಹಣವನ್ನ ಪಡಿತರ ಚೀಟಿದಾರರ ಖಾತೆಗೆ ವರ್ಗಾವಣೆ ಮಾಡುತ್ತಿತ್ತು. ನಂತರ ಹಣದ ಬದಲಾಗಿ 5 ಕೆಜಿ ಹೆಚ್ಚುವರಿ ಅಕ್ಕಿಯನ್ನೇ ನೀಡುತ್ತಿದೆ. ಇದೀಗ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ ಎನ್ನಲಾಗಿದೆ. ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀ ಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ . ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಚಿವ ಸಂಪುಟದಲ್ಲಿ ಇದಕ್ಕೆ ಸಮ್ಮತಿ ಸಿಕ್ಕಿದರೆ ಸದ್ಯದಲ್ಲೇ ಆಹಾರ ಕಿಟ್ ನೀಡುವ ಯೋಜನೆ ಜಾರಿಗೆ  ಬರುವ ಸಾಧ್ಯತೆಯಿದೆ. ಜುಲೈ 2 ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಬಗ್ಗೆ ಇಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.vtu

Key words: government, food kits, ration card,  holders

The post ರಾಜ್ಯ  ಪಡಿತರ ಚೀಟಿದಾರರಿಗೆ ‘ಆಹಾರದ ಕಿಟ್’ ನೀಡಲು ಸರ್ಕಾರ ಚಿಂತನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ನಿಧನ: ಇಂದು ಅಂತ್ಯಕ್ರಿಯೆ

ಮೈಸೂರು,ಮಾರ್ಚ್,12,2026 (www.justkannada.in):  ನಿನ್ನೆ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ಕೆ...

മലയാളം എവിടെ? ചങ്ങനാശ്ശേരി റെയില്‍വേ സ്‌റ്റേഷനിലെ ഹിന്ദി ബോര്‍ഡിനെതിരെ സോഷ്യല്‍ മീഡിയ

കോട്ടയം: ചങ്ങനാശ്ശേരി റെയില്‍വേസ്റ്റ്ഷനിലെ പുതുക്കിയ പ്രവേശന കവാടത്തിലും കെട്ടിടത്തിലും ഹിന്ദിയില്‍ ബോര്‍ഡ്...

Suryakumar Yadav: డ్రెస్సింగ్ రూమ్ సీక్రెట్స్ బయటపెట్టిన సూర్య.. గంభీర్ స్పీచ్‌తో ప్లేయర్లలో పూనకాలు!

Suryakumar Yadav: భారత్ ప్రపంచ క్రికెట్‌లో ఆధిపత్యం చెలాయిస్తోంది. మూడు సార్లు...