12
March, 2026

A News 365Times Venture

12
Thursday
March, 2026

A News 365Times Venture

ಭಾರಿ ಮಳೆ, ಪ್ರವಾಹ ಭೀತಿ: ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ

Date:

ಮಂಡ್ಯ,ಜೂನ್,25,2025 (www.justkannada.in): ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ.

ಕೆಆರ್ ಎಸ್ ಜಲಾಶಯದಿಂದ ಸುಮಾರು 30,000 ಕ್ಯೂಸೆಕ್ಸ್ ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ ನೀಡಲಾಗಿದೆ.

ಕೆ.ಆರ್.ಎಸ್. ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಆತಂಕ ಹಿನ್ನೆಲೆಯಲ್ಲಿ ಜನರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಬ ದೇವಸ್ಥಾನ, ಘೋಸಾಯ್ ಘಾಟ್ ಪ್ರದೇಶಗಳಿಗೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಪಿಂಡ ಪ್ರಧಾನ ಪೂಜೆಗೂ ನಿರ್ಬಂಧ ವಿಧಿಸಲಾಗಿದೆ.

ನದಿ ತೀರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.vtu

Key words: flood threat, Restrictions, tourist, Cauvery river, KRS

The post ಭಾರಿ ಮಳೆ, ಪ್ರವಾಹ ಭೀತಿ: ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು...

ബത്തേരിയിലെ ശുചീകരണ തൊഴിലാളികളെ പിരിച്ചുവിടാന്‍ യു.ഡി.എഫ് ഭരണസമിതി; പ്രതിഷേധം

ബത്തേരി: സുല്‍ത്താന്‍ ബത്തേരിയിലെ ശുചീകരണ തൊഴിലാളികളെ പിരിച്ചുവിടാന്‍ യു.ഡി.എഫ് ഭരണസമിതിയുടെ നീക്കം....

`மக்கள் திமுக அரசை தூக்கி எறிய விரும்புகிறார்கள்; NDA மட்டுமே…' – திருச்சியில் பிரதமர் மோடி உரை

தமிழ்நாடு சட்டமன்றத் தேர்தலுக்கான களம் பரபரக்கிறது. தொடர்ந்து முக்கிய அரசியல் கட்சித்...

Interest Rates Hike: ఆ బ్యాంక్‌లో లోన్ తీసుకున్న వారికి బిగ్‌షాక్..పెరగనున్న వడ్డీ రేట్లు..

సొంత ఇల్లు కట్టుకోవాలన్నా లేదా వ్యాపారాన్ని విస్తరించాలన్నా చాలామంది బ్యాంక్ రుణాలపైనే...