12
March, 2026

A News 365Times Venture

12
Thursday
March, 2026

A News 365Times Venture

ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ

Date:

ಬೆಂಗಳೂರು,ಜೂನ್,25,2025 (www.justkannada.in): ಸಂಕಷ್ಟದಲ್ಲಿರುವಕಲಾವಿದರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಕಲಾವಿದರ ಮಾಶಾಸನವನ್ನ 2 ಸಾವಿರ ರೂ.ಗಳಿಂದ 2500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇದಕ್ಕಾಗಿ 32.94 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.

ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ, ‘ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ- 374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ಸರ್ಕಾರದ ತಾತ್ವಿಕ ಅನುಮೋದನೆ ನೀಡಲಾಗಿದೆ.

ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚವನ್ನು 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಲೆಕ್ಕಶೀರ್ಷಿಕೆ: ರೂ.32,94,61,000/-(ರೂಪಾಯಿ ಮೂವತ್ತೆರಡು ಕೋಟಿ ತೊಂಬತ್ತಾಲ್ಕು ಲಕ್ಷದ ಅರವತ್ತೊಂದು ಸಾವಿರಗಳು ಮಾತ್ರಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಲು ಸರ್ಕಾರ ಮಂಜೂರಾತಿ ನೀಡಿರುವುದಾಗಿ ತಿಳಿಸಿದ್ದಾರೆ.vtu

Key words: Good news, artists, government, increase

The post ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ...

ഇസ്രഈലിലെ അംബാസഡറെ ഔദ്യോഗികമായി പിൻവലിച്ച് സ്പെയിൻ

മാഡ്രിഡ്: 2021 മുതൽ സ്പെയിനിന്റെ ഇസ്രഈൽ അംബാസഡറായിരുന്ന അന്ന സലോമോനയെ ഔദ്യോഗികമായി...

“திமுக அரசியல் கட்சியல்ல, அது ஒரு கார்ப்பரேட் கம்பெனி" – திருச்சியில் எடப்பாடி பழனிசாமி

தமிழ்நாடு சட்டமன்றத் தேர்தலுக்கான களம் பரபரக்கிறது. தொடர்ந்து முக்கிய அரசியல் கட்சித்...

Off The Record: వాసుపల్లి వ్యవహారం వైసీపీ నాయకత్వానికి తలపోటైందా?

Off The Record: వాసుపల్లి గణేష్ కుమార్….విశాఖ దక్షిణ నియోజకవర్గ మాజీ...