4
May, 2026

A News 365Times Venture

4
Monday
May, 2026

A News 365Times Venture

ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ

Date:

ಬೆಂಗಳೂರು,ಜೂನ್,25,2025 (www.justkannada.in): ಸಂಕಷ್ಟದಲ್ಲಿರುವಕಲಾವಿದರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಕಲಾವಿದರ ಮಾಶಾಸನವನ್ನ 2 ಸಾವಿರ ರೂ.ಗಳಿಂದ 2500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇದಕ್ಕಾಗಿ 32.94 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.

ಈ ಕುರಿತು ಆದೇಶ ಹೊರಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ, ‘ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ- 374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ಸರ್ಕಾರದ ತಾತ್ವಿಕ ಅನುಮೋದನೆ ನೀಡಲಾಗಿದೆ.

ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚವನ್ನು 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಲೆಕ್ಕಶೀರ್ಷಿಕೆ: ರೂ.32,94,61,000/-(ರೂಪಾಯಿ ಮೂವತ್ತೆರಡು ಕೋಟಿ ತೊಂಬತ್ತಾಲ್ಕು ಲಕ್ಷದ ಅರವತ್ತೊಂದು ಸಾವಿರಗಳು ಮಾತ್ರಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಲು ಸರ್ಕಾರ ಮಂಜೂರಾತಿ ನೀಡಿರುವುದಾಗಿ ತಿಳಿಸಿದ್ದಾರೆ.vtu

Key words: Good news, artists, government, increase

The post ಕಷ್ಟದಲ್ಲಿರುವ ಕಲಾವಿದರಿಗೆ ಗುಡ್ ನ್ಯೂಸ್: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇടതിനെ കൈവിട്ട് കാസര്‍ഗോഡ് ജില്ലയും; വിജയിച്ചുകയറാനായത് ഒരേയൊരു മണ്ഡലത്തില്‍ 

കാസര്‍കോട്: 2026 ലെ കേരള നിയമസഭാ തെരഞ്ഞെടുപ്പിന്റെ വോട്ടെണ്ണല്‍ ഫലങ്ങള്‍ പുറത്തുവരുമ്പോള്‍,...

கொளத்தூர்: முதல்வர் தொகுதியிலும் பறந்த `விசில்' – ஸ்டாலினை வீழ்த்திய வி.எஸ்.பாபு – எப்படி?

தமிழக அரசியல் வரலாற்றில் 2026 சட்டமன்றத் தேர்தல் முடிவுகள் எவரும் எதிர்பாராத...

Kavitha: పాత రాజకీయాలకు విసిగిపోయారు.. తెలంగాణలో కూడా మార్పు తథ్యం: కవిత

తమిళనాడు ఎన్నికల ఫలితాలు దేశ రాజకీయాల్లో కొత్త చర్చకు దారితీసిన వేళ,...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು...