5
May, 2026

A News 365Times Venture

5
Tuesday
May, 2026

A News 365Times Venture

ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ- ರಾಜ್ಯ ಬಿಜೆಪಿ ವಕ್ತಾರ ಎಂ.ಜಿ ಮಹೇಶ್

Date:

ಮೈಸೂರು,ಜುಲೈ,1,2025 (www.justkannada.in): ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ. ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಹೇಳಿಕೊಂಡು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಎಂ.ಜಿ ಮಹೇಶ್, ಸಿದ್ದರಾಮಯ್ಯ ರಾಜಕೀಯ ಲಾಭಕ್ಕಾಗಿ ಹಿಂದುಳಿದ ವರ್ಗಗಳನ್ನು ಬಳಸಿಕೊಂಡಿದ್ದಾರೆ. ಮಾತೆತ್ತಿದರೆ ಅಕ್ಕಿ ಕೊಟ್ಟೇ ಎಂದು ಹೇಳುತ್ತಾರೆ. ಆದರೆ ದೇವರಾಜ ಅರಸು ಅವರು ಉಳುವವರಿಗೆ ಭೂಮಿ ಕೊಟ್ಟರು. ಹಿಂದುಳಿದ ವರ್ಗಗಳ ನಾಯಕರನ್ನು ಬೆಳೆಸಿದರು‌. ದೇವರಾಜ ಅರಸು ಅವರೇ ನಿಜವಾದ ಹಿಂದುಳಿದ ವರ್ಗಗಳ ನಾಯಕರು. ಸಿಎಂ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಹಿಂದುಳಿದ ವರ್ಗಗಳ ನಾಯಕ ಎಂದು ಹೇಳಿಕೊಳ್ಳುತ್ತಾರೆ. ಹಿಂದುಳಿದ ವರ್ಗಗಳ ಜನರಿಗೆ ದ್ರೋಹ ಮಾಡಿರುವ ಸಿದ್ದರಾಮಯ್ಯ ಅವರನ್ನು ಜನರು ಧಿಕ್ಕರಿಸಬೇಕು ಎಂದು ಕರೆ ನೀಡಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ ಎಸ್ ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಈಗಾಗಲೇ ಮೂರು ಮೂರು ಬಾರಿ ಆರ್ ಎಸ್ ಎಸ್ ಬ್ಯಾನ್ ಮಾಡಿತ್ತು. ಇದೀಗ ಮತ್ತೆ ಆರ್ ಎಸ್ ಎಸ್ ನಿಷೇಧ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ಎಂ.ಜಿ ಮಹೇಶ್ ಹೇಳಿದರು.vtu

Key words: CM Siddaramaiah, backward classes, State, BJP spokesperson, M.G. Mahesh

The post ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ- ರಾಜ್ಯ ಬಿಜೆಪಿ ವಕ್ತಾರ ಎಂ.ಜಿ ಮಹೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്നെ ജയിപ്പിച്ചത് ഹിന്ദുക്കള്‍, അവര്‍ക്ക് വേണ്ടി പ്രവര്‍ത്തിക്കും; മുസ്‌ലിം വോട്ടുകള്‍ പൂര്‍ണമായും തൃണമൂലിന് പോയി: സുവേന്ദു അധികാരി

ഹാല്‍ദിയ: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ തൃണമൂല്‍ കോണ്‍ഗ്രസിനെ പരാജയപ്പെടുത്തി ബി.ജെ.പി...

TVK: 'சென்னைவாசி, சிபி சத்யராஜின் ஆதரவு' – சிங்காநல்லூரை வென்ற ஸ்ரீ கிரி பிரசாத்தின் பின்னணி என்ன?

சிங்காநல்லூர் தொகுதியில் மொத்தம் உள்ள 2 லட்சத்து 69 ஆயிரத்து 941...

Gold and Silver Prices: మళ్లీ తగ్గుతున్న బంగారం, వెండి ధరలు..

Gold and Silver Prices: బంగారం, వెండి ధరలు ఇటీవల వరుసగా...

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,5,2026 (www.justkannada.in):  ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ. ಮರು ಮತ...