2
May, 2026

A News 365Times Venture

2
Saturday
May, 2026

A News 365Times Venture

ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಎನ್.ಚಲುವರಾಯಸ್ವಾಮಿ

Date:

ಮೈಸೂರು ಜುಲೈ, 4,2025 (www.justkannada.in): ಕ್ಷೇತ್ರ ಭೇಟಿಯಲ್ಲಿ,ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ,ಕರ್ತವ್ಯ ಲೋಪವೆಸಗುವ ಅಧಿಕಾರಿ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

ಮೈಸೂರಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಚಲುವರಾಯಸ್ವಾಮಿ ಅವರು, ಇನ್ನಷ್ಟು  ಕಾಳಜಿ ವಹಿಸಿ ಕೆಲಸ ಮಾಡುವಂತೆ  ಸೂಚನೆ ನೀಡಿದರು.

ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನಿಗಾ ವಹಿಸಿ. ಶೇ 100% ಬಿತ್ತನೆಯಾಗುವಂತೆ ನೋಡಿಕೊಳ್ಳಿ. ಭೂಮಿಯ ಫಲವತ್ತತೆ,   ಪರಿಸರ ಸಂರಕ್ಷಣೆ ಹಾಗೂ ಮಾನವನ ಆರೋಗ್ಯದ ದೃಷ್ಟಿಯಿಂದ ರಾಸಾಯನಿಕ ಮತ್ತು ‌ಕೀಟನಾಶಕಗಳ ಬಳಕೆ ಕಡಿಮೆ ಮಾಡಲು ರೈತಾಪಿ ವರ್ಗದಲ್ಲಿ ಜಾಗೃತಿ ಮೂಡಿಸಿ ಎಂದು ನಿರ್ದೇಶನ ನೀಡಿದರು.

ರೈತರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ.

ಮಳೆ ಪರಿಸ್ಥಿತಿಗೆ ಅನುಗುಣವಾಗಿ ಪರ್ಯಾಯ ಬೆಳೆಗಳ ಬಗ್ಗೆಯೂ ಮಾರ್ಗದರ್ಶನ ನೀಡಿ‌, ಕೃಷಿ ಯಾಂತ್ರಿಕರಣ, ಕೃಷಿ ಭಾಗ್ಯ ಯೋಜನೆ ಜಾರಿ  ,ಸಾವಯವ ಕೃಷಿ, ಸಮಗ್ರ ಬೇಸಾಯದ ಬಗ್ಗೆ ಜಾಗೃತಿ ಮೂಡಿಸಲು ಆದ್ಯತೆ ನೀಡಿ ಎಂದ ಅವರು ಹೇಳಿದರು.

ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಫಲ ರೈತರಿಗೆ ತಲುಪಿಸುವಲ್ಲಿ ಆಸಕ್ತಿ ವಹಿಸಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ   ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಕೃಷಿ ಆಯುಕ್ತ ವೈ.ಎಸ್ ಪಾಟೀಲ್ ನಿರ್ದೇಶಕರಾದ ಡಾ. ಜಿ.ಟಿ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಮಹಮದ್ ಪರವೇಜ ಬಂಥನಾಳ, ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನುಪ್, ಬೀಜ ಪ್ರಮಾಣೀಕರಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಡಾ. ಸದಾಶಿವ ಹಾಗೂ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೃಷಿ ಅಧಿಕಾರಿಗಳು  ಹಾಜರಿದ್ದರು.vtu

Key words: Strict action, negligent officials, Minister, N. Chaluvarayaswamy

The post ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಎನ್.ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഞങ്ങള്‍ കടല്‍ക്കൊള്ളക്കാരെപ്പോലെ’; ഇറാനിയന്‍ കപ്പലുകള്‍ പിടിച്ചെടുക്കുന്നതിനെക്കുറിച്ച് ട്രംപ്

വാഷിങ്ടണ്‍: ഹോര്‍മുസ് കടലിടുക്കില്‍ ഇറാനിയന്‍ കപ്പലുകള്‍ പിടിച്ചെടുക്കുന്ന യു.എസ് നാവികസേനയുടെ നീക്കത്തെ...

`மனக்குமுறல்கள் போராட்டமாக வெடிப்பது இயல்புதான்' – கோவையில் செல்வப்பெருந்தகை பேட்டி

தமிழ்நாடு அரசியல் களத்தில் பரபரப்பாக 2026 சட்டமன்றத் தேர்தல் நடந்து முடிந்திருக்கிறது....

KKR Vs SRH: సన్ రైజర్స్ హైదరాబాద్ ఆరో విజయానికి బ్రేక్..? కేకేఆర్‌లోకి స్టార్ ప్లేయర్ ఎంట్రీ..

రేపు (మే3,2026) ఆదివారం మధ్యాహ్నం 3:30 గంటలకు ఉప్పల్ స్టేడియంలో సన్‌రైజర్స్...

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

ಬೆಂಗಳೂರು,ಮೇ,2,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ...