12
March, 2026

A News 365Times Venture

12
Thursday
March, 2026

A News 365Times Venture

ಇಂದಿನಿಂದ ಪಡಿತರ ಲಾರಿ ಮಾಲೀಕರು, ಚಾಲಕರ ಮುಷ್ಕರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್

Date:

ಬೆಂಗಳೂರು, ಜುಲೈ 8,2025 (www.justkannada.in):  ನಾಲ್ಕು ತಿಂಗಳಿಂದ ಪಡಿತರ ಆಹಾರ ಧಾನ್ಯ ಸಾಗಣಿಕೆ ವೆಚ್ಚ ನೀಡದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರದ ವಿರುದ್ದ ಪಡಿತರ ಲಾರಿ ಮಾಲೀಕರು, ಚಾಲಕರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದ್ದಾರೆ.

ನಾಲ್ಕು ತಿಂಗಳಿಂದ ಪಡಿತರ ಆಹಾರ ಧಾನ್ಯ ಸಾಗಣಿಕೆ ವೆಚ್ಚ 260 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಲಾರಿ ಮಾಲೀಕರು, ಚಾಲಕರು ಇಂದಿನಿಂದ ಮುಷ್ಕರ  ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ ಈ ತಿಂಗಳ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಬಾಕಿ ಹಣ ಬಿಡುಗಡೆಗೆ  ಸರ್ಕಾರಕ್ಕೆ 15ದಿನಗಳ ಗಡುವು ನೀಡಲಾಗಿತ್ತು. ಆದರೆ ಸರ್ಕಾರ ಪಾವತಿ ಮಾಡದ ಹಿನ್ನೆಲೆಯಲ್ಲಿ  ಪಡಿತರ ಲಾರಿ ಮಾಲೀಕರು ಚಾಲಕರು ಅಕ್ಕಿ ಸಾಗಾಣೆ ಮಾಡುವುದನ್ನ ಬಂದ್ ಮಾಡಿದ್ದಾರೆ. ಬಾಕಿ ಹಣ ಬಿಡುಗಡೆಗೆ ಒತ್ತಾಯಿಸಿ ಗೋದಾಮು ಮುಂದೆ ಲಾರಿ ನಿಲ್ಲಿಸಿ ಮುಷ್ಕರ ಹೂಡಿದ್ದಾರೆ.

ಈ ಕುರಿತು  ಮಾತನಾಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ವಿ‌.ಆರ್.ಷಣ್ಮುಗಪ್ಪ, ಯಾವುದೇ ಭರವಸೆ ಈಡೇರಿಸದ ಹಿನ್ನೆಲೆ ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್​ ಎಂದಿದ್ದಾರೆ. ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಹೇಳಿದ್ದಾರೆ.

5 ತಿಂಗಳಿನಿಂದ 260 ಕೋಟಿ ರೂ. ಬಿಡುಗಡೆ ಆಗಬೇಕು. ಜೂ.19ರಂದು 100 ಕೋಟಿ ರೂ. ಹಾಕುವುದಾಗಿ ಹೇಳಿದ್ದರು. ಆದರೆ ಈವರೆಗೂ 1 ರೂ. ಹಣ ಬಂದಿಲ್ಲ ನಮ್ಮ ಖಾತೆಗೆ. ಆಹಾರ ಸಚಿವರು, ಅಧಿಕಾರಿಗಳು ಮಾತುಕತೆಗೆ ಕರೆದಿಲ್ಲ, ಹಾಗಾಗಿ ಇಂದಿನಿಂದ ಮುಷ್ಕರ ಮಾಡಲು ಮುಂದಾಗಿದ್ದೇವೆ. ಹಣ ಬಂದ ಮೇಲೆ ನಾವು ಅಕ್ಕಿ ಸರಬರಾಜು ಮಾಡಲು ಮುಂದಾಗುತ್ತೇವೆ ಎಂದಿದ್ದಾರೆ.vtu

Key words: Ration, truck owners ,drivers ,strike

The post ಇಂದಿನಿಂದ ಪಡಿತರ ಲಾರಿ ಮಾಲೀಕರು, ಚಾಲಕರ ಮುಷ್ಕರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ,...

സര്‍ സി.പിയെ ചോദ്യം ചെയ്യാന്‍ മടിക്കാത്ത ആലപ്പുഴയിലെ തൊഴിലാളി വര്‍ഗം ജി. സുധാകരനെയും ചോദ്യം ചെയ്യും: എം. ശിവപ്രസാദ്

തിരുവനന്തപുരം: മുന്‍ മന്ത്രിയും സി.പി.ഐ.എം മുതിര്‍ന്ന നേതാവുമായ ജി. സുധാകരനെതിരെ രൂക്ഷവിമര്‍ശനവുമായി...

Ring Roads In Telangana: తెలంగాణ జిల్లాలకు మహర్దశ.. ప్రతీ జిల్లాకో రింగు రోడ్డు..

తెలంగాణ రాష్ట్రవ్యాప్తంగా రవాణా వ్యవస్థను సమూలంగా ప్రక్షాళన చేస్తూ.. ప్రతి జిల్లా...