4
May, 2026

A News 365Times Venture

4
Monday
May, 2026

A News 365Times Venture

ಕಬಿನಿ ಜಲಾಶಯದಿಂದ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ

Date:

ಮೈಸೂರು ಜುಲೈ, 12,2025 (www.justkannada.in): ಜಿಲ್ಲೆಯ ಕಬಿನಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಮುಂಗಾರು ಹಂಗಾಮಿಗಾಗಿ ‘ಕಟ್ಟು ನೀರು ಪದ್ಧತಿ’ಯಲ್ಲಿ (ತಿಂಗಳಲ್ಲಿ 15 ದಿನ ಹರಿಸಿ, 10 ದಿನ ನಿಲ್ಲಿಸುವುದು) ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಇಂದು ಕಾಡಾದಲ್ಲಿರುವ ನೀರಾವರಿ ಇಲಾಖೆಯ ದಕ್ಷಿಣ ವಲಯ ಮುಖ್ಯ ಎಂಜಿನಿಯರ್‌ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಜುಲೈ 15 ರಿಂದ  ಕೆರೆಕಟ್ಟೆಗಳಿಗೆ  ಹಾಗೂ ಜುಲೈ 25 ರಿಂದ ಕಟ್ಟು ಪದ್ದತಿಯ  ಆಧಾರದಲ್ಲಿ ಕಬಿನಿ ಜಲಾಶಯದ ನಾಲಾ ಜಾಲಗಳಲ್ಲಿ  ನೀರು ಹರಿಸುವುದಾಗಿ ಪ್ರಕಟಿಸಲಾಯಿತು.

ನಾಲಾ ಜಾಲದ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ನೀರಾವರಿ ಇಲಾಖೆಯಿಂದ ಮಾಹಿತಿ ಪಡೆದ ಸಚಿವ ಹೆಚ್.ಸಿ ಮಹದೇವಪ್ಪ ನಾಲೆಯಲ್ಲಿ ಹೂಳು ಹಾಗೂ ಜಂಗಲ್ ತೆರವುಗೊಳಿಸಿ ನಂತರ ನೀರು ಹರಿಸಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.

ನಾಲೆಗಳಲ್ಲಿ ಹೂಳು ತೆರವುಗೊಳಿಸುವ ಮೂಲಕ ಕೊನೆಯವರೆಗೂ ನೀರು ತಲುಪುವಂತೆ ನಿರ್ವಹಣೆ ಮಾಡಬೇಕು  ಎಂದು ಸಭೆಯಲ್ಲಿ ಶಾಸಕರು ತಿಳಿಸಿದರು.

ಸಭೆಯಲ್ಲಿ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಕೊಳ್ಳೆಗಾಲ ವಿಧಾನ ಸಭಾ ಕ್ಷೇತ್ರದ ಶಾಸಕ ಆರ್.ಕೃಷ್ಣಮೂರ್ತಿ ಹನೂರು ವಿಧಾನ ಸಭಾ ಕ್ಷೇತ್ರದ ಶಾಸಕ  ಎಂ.ಆರ್‌.ಮಂಜುನಾಥ್‌, ವಿಧಾನ ಪರಿಷತ್ ಸದಸ್ಯ  ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಲಕ್ಷ್ಮೀ ಕಾಂತ ರೆಡ್ಡಿ, ಚಾಮರಾಜನಗದ ಜಿಲ್ಲಾಧಿಕಾರಿಗಳಾದ ಶಿಲ್ಪಾನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸಿಫ್ ಹಾಗೂ ಕಬಿನಿ ನೀರಾವರಿ ಸಲಹಾ ಸಮಿತಿಯ ಕಬಿನಿ  ಅಧೀಕ್ಷಕ ಇಂಜಿನಿಯರ್ ಮಹೇಶ.ಕೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.vtu

Key words: release,  water, Kabini reservoir, canals

The post ಕಬಿನಿ ಜಲಾಶಯದಿಂದ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഓണ്‍ലൈന്‍ ട്രേഡിങ് തട്ടിപ്പ്; 25 കോടിയോളം തട്ടിയെടുത്ത മുഖ്യ പ്രതിയടക്കം രണ്ട് പേര്‍ ഹൈദരാബാദില്‍ പിടിയില്‍

കൊച്ചി: ഓണ്‍ലൈന്‍ ട്രേഡിങിലൂടെ എറണാകുളം സ്വദേശിയില്‍ നിന്നും 25 ലക്ഷത്തോളം തട്ടിയെടുത്ത...

TVK: சென்னையில் 16 தொகுதிகளில் தவெக முன்னிலை; 'திமுக கோட்டை'யில் ஸ்டாலின், உதயநிதியின் நிலவரம் என்ன?

தமிழக சட்டமன்றத் தேர்தல் ஏப்ரல் 23-ம் தேதி நடந்தது. அதைத் தொடர்ந்து...

West Bengal Results 2026: బెంగాల్‌లో బీజేపీ దూకుడు.. మ్యాజిక్ ఫిగర్ దాటిన కమలం..

West Bengal Election Results: పశ్చిమ బెంగాల్ ఎన్నికల ఫలితాలు అడుగడుగున...

2027 അല്ല 2047 ആയാലും സമാജ്‌വാദി പാര്‍ട്ടി അധികാരത്തിലെത്തില്ല; അഖിലേഷിനെതിരെ പരിഹാസവുമായി യു.പി ഉപമുഖ്യമന്ത്രി

ലഖ്നൗ: ഉത്തര്‍പ്രദേശ് രാഷ്ട്രീയത്തില്‍ ഭരണകക്ഷിയായ ബി.ജെ.പിയും സമാജ്‌വാദി പാര്‍ട്ടിയും (എസ്.പി) തമ്മിലുള്ള...