13
March, 2026

A News 365Times Venture

13
Friday
March, 2026

A News 365Times Venture

ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿದ್ದು ಈ ಸಾಧನೆಯನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಶಸ್ವಿ ಬಾಹ್ಯಾಕಾಶ ಯಾತ್ರೆಯನ್ನು ಮುಗಿಸಿ, ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ ಅವರನ್ನು ದೇಶವಾಸಿಗಳ ಪರವಾಗಿ ಸ್ವಾಗತಿಸುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿನೀಡಿದ ಮೊದಲ ಭಾರತೀಯನೆಂಬ ದಾಖಲೆ ಬರೆದ ಅವರಿಗೆ ಅಭಿನಂದನೆಗಳು.

ಇಡೀ ರಾಷ್ಟ್ರ ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡು ಹೆಮ್ಮೆಪಡುತ್ತಿದೆ. ಶುಭಾಂಶು ಶುಕ್ಲಾರವರು ತಮ್ಮ ಪರಿಶ್ರಮ ಮತ್ತು ಧೈರ್ಯದ ಮೂಲಕ ಕೋಟ್ಯಂತರ ಜನರ ಕನಸುಗಳಿಗೆ ರೆಕ್ಕೆಯಾಗಿದ್ದಾರೆ. ಅವರ ಈ ಬಾಹ್ಯಾಕಾಶ ಪಯಣವು ಭವಿಷ್ಯದ ಸಂಶೋಧನೆಗಳ ಹಾದಿಯನ್ನು ಸುಗಮವಾಗಿಸಿದೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.vtu

Key words: Space, new milestone, India, CM, Siddaramaiah

The post ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್13,2026 (www.justkannada.in):  ರಾಜಕೀಯವಾಗಿ ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರರನ್ನು ಬೆಳೆಸುವಂತೆ...

കടന്നുവന്ന കനല്‍വഴികള്‍ മറ്റുള്ളവര്‍ മറന്നാലും ഞാന്‍ മറക്കില്ല; എന്റെ ചോരവീണ മണ്ണില്‍ തലയുയര്‍ത്തിത്തന്നെ നില്‍ക്കും: കെ. സുധാകരന്‍

കണ്ണൂര്‍: നിയമസഭാ സ്ഥാനാര്‍ത്ഥി നിര്‍ണയത്തിലെ അതൃപ്തി പരസ്യമാക്കി കോണ്‍ഗ്രസ് നേതാവ് കെ.സുധാകരന്‍....

பண்ணையாளர்கள் அறிமுகப்படுத்திய பரிசுகள்… வளைக்கப்பட்ட வாக்காளர்கள்! | நினைவுச் சுவடுகள் 09

பரிசுகளால் வளைக்கப்பட்ட வாக்காளர்கள்நினைவுச் சுவடுகள்தமிழ்நாட்டு அரசியலில் தேர்தல்கள் என்றால் பொதுக்கூட்டம், மாநாடு,...