4
May, 2026

A News 365Times Venture

4
Monday
May, 2026

A News 365Times Venture

ಆ.15ರೊಳಗೆ ಒಳ ಮೀಸಲಾತಿ ಜಾರಿಯಾಗದಿದ್ರೆ ಕರ್ನಾಟಕ ಬಂದ್- ಎ. ನಾರಾಯಣಸ್ವಾಮಿ

Date:

ಬೆಂಗಳೂರು,ಜುಲೈ,16,2025 (www.justkannada.in):   ಒಳ ಮೀಸಲಾತಿ ಜಾರಿಗೆ ತೀವ್ರ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿರುವ  ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು, ಆಗಸ್ಟ್ 15ರೊಳಗೆ ಒಳಮೀಸಲಾತಿ ಜಾರಿಯಾಗದಿದ್ದರೇ ಕರ್ನಾಟಕ ಬಂದ್ ಗೆ ಕರೆ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಆಗಸ್ಟ್ 10 ರಿಂದ 15ರೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು. ಆಗಸ್ಟ್ 1 ರಂದು ಒಳ ಮೀಸಲಾಗಿ ಜಾರಿಗೆ ಆಗ್ರಹಿಸಿ  ಜಿಲ್ಲಾ ಕೇಂದ್ರಗಳಲ್ಲಿ  ಮಾದಿಗ ಸಮುದಾಯದಿಂದ ಅರಬೆತ್ತಲೆ ಪ್ರತಿಭಟನೆ ನಡೆಯಲಿದೆ. ಧರಣಿ ಬಳಿಕವೂ ಒಳ ಮೀಸಲಾತಿ ಜಾರಿಯಾಗದಿದ್ದರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತೇವೆ ಎಂದು ತಿಳಿಸಿದರು.

ವೈಜ್ಞಾನಿಕ ದತ್ತಾಂಶವಿದ್ದರೆ ರಾಜ್ಯಗಳು ಒಳಮೀಸಲಾತಿ ಜಾರಿಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿ ಆಗಸ್ಟ್ 1 ಕ್ಕೆ ಒಂದು ವರ್ಷವಾಗುತ್ತಿರುವ ಹಿನ್ನೆಲೆ ಸರ್ಕಾರವನ್ನು ಎಚ್ಚರಿಸಲು ಪ್ರತಿಭಟನೆ ನಡೆಸಲಾಗುತ್ತದೆ. ದಕ್ಷಿಣ ಭಾರತದಲ್ಲಿ ಮಾದಿಗರು ಎಲ್ಲಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ತೆಲಂಗಾಣದಲ್ಲಿ ಒಳ ಮೀಸಲಾತಿ ಜಾರಿಗೊಳಿಸಿ ಏಳು ತಿಂಗಳಾಗಿದೆ. ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೀಸಲು ಕುರಿತು ಯಾವುದೇ ಸ್ಪಷ್ಟತೆ ನೀಡುತ್ತಿಲ್ಲ  ಎಂದು ಸಿಎಂ ಸಿದ್ದರಾಮಯ್ಯಗೆ ಕುಟುಕಿದ್ದಾರೆ.vtu

Key words: Karnataka bandh, internal reservation, A. Narayanaswamy

The post ಆ.15ರೊಳಗೆ ಒಳ ಮೀಸಲಾತಿ ಜಾರಿಯಾಗದಿದ್ರೆ ಕರ್ನಾಟಕ ಬಂದ್- ಎ. ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഖലിസ്ഥാനെ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ

  ഒട്ടാവ: ഖലിസ്ഥാന്‍ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ. രഹസ്യാന്വേഷണ...

4 States Election Results: அனல் பறக்கும் அரசியல் களம் – வெல்லப் போவது யார்? – நாளை வாக்கு எண்ணிக்கை | Live Updates

புதுச்சேரி, கேரளா மற்றும் அஸ்ஸாம் ஆகிய மூன்று மாநிலச் சட்டமன்றத் தேர்தல்கள்...

Mamata Banerjee: ఫలితాలకు ముందే దీదీ షాకింగ్ నిర్ణయం.. సీఎం నివాసం ఖాళీ..?

పశ్చిమ బెంగాల్ రాజకీయాల్లో ప్రస్తుతం ఒక వార్త తీవ్ర సంచలనం సృష్టిస్తోంది....

മുഖ്യമന്ത്രി ഫേസ്ബുക്ക് ബയോ തിരുത്തിയത് ഇന്നല്ല, വോട്ടെണ്ണല്‍ കാരണവുമല്ല; പി.ബി അംഗമെന്ന് മാറ്റിയത് മാര്‍ച്ച് 16ന്

തിരുവനന്തപുരം: വോട്ടെണ്ണലിന് തൊട്ടുമുമ്പ് മുഖ്യമന്ത്രി പിണറായി വിജയന്‍ തന്റെ ഫേസ്ബുക്ക് ബയോ തിരുത്തിയെന്ന...