14
March, 2026

A News 365Times Venture

14
Saturday
March, 2026

A News 365Times Venture

ಹಾಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಿ- ಕೆ.ವಿವೇಕಾನಂದ ಮನವಿ

Date:

ಮೈಸೂರು,ಜುಲೈ,23,2025 (www.justkannada.in): ನ್ಯಾಯಾಲಯದಲ್ಲಿ ವ್ಯಾಜ್ಯ ಮುಗಿಯುವವರೆಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರಿಗೆ ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಮನವಿ ಮಾಡಿದ್ದಾರೆ.

ಈ ಕುರಿತು ಸಚಿವ ಎಂ.ಸಿ ಸುಧಾಕರ್ ಅವರಿಗೆ ಪತ್ರ ಬರೆದಿರುವ ಎಂಎಲ್ ಸಿ ವಿವೇಕಾನಂದ, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವಾ ಅವಧಿ ದಿನಾಂಕ:-2/8/2025 ರಂದು ಮುಗಿಯಲ್ಲಿದೆ.  ಏಕ ಕಾಲದಲ್ಲಿ ಸರಿ ಸುಮಾರು 10500 ಅತಿಥಿ ಉಪನ್ಯಾಸಕರು ಕರ್ತವ್ಯದಿಂದ ಬಿಡುಗಡೆ ಹೊಂದಲಿದ್ದಾರೆ. ಇದರಿಂದ ಕಾಲೇಜಿನಲ್ಲಿ ಪಾಠಪ್ರವಚನಕ್ಕೆ ತೊಂದರೆಯಾಗಲಿದ್ದು, ಅಲ್ಲದೆ ಸ್ಥಾನಕ್ಕೆ ಪರ್ಯಾಯವಾಗಿ ನೇಮಿಸಿಕೊಳ್ಳಲು ನ್ಯಾಯಾಲಯದಲ್ಲಿ ವ್ಯಾಜ್ಯವಿರುವುದರಿಂದ ಯಾವುದೇ ನೇಮಕಾತಿಯ ಕೌನ್ಸಿಲಿಂಗ್ ಪ್ರಕ್ರಿಯೆ ಕೈಗೊಂಡಿರುವುದಿಲ್ಲ.

ಈ ಕಾರಣದಿಂದಾಗಿ ಇಲಾಖೆಯು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಾಗದಿರುವುದರಿಂದ ಹಾಗೂ ವಿದ್ಯಾರ್ಥಿಗಳಿಗೆ ಇನ್ನೂ 2 ತಿಂಗಳಿಗೆ ಪರೀಕ್ಷೆ ಬರುವುದರಿಂದ. ವಿದ್ಯಾರ್ಥಿಗಳ & ಶೈಕ್ಷಣಿಕ ಹಿತದೃಷ್ಟಿಯಿಂದ ವ್ಯಾಜ್ಯವು ಇತ್ಯರ್ಥ ಆಗುವವರೆಗೂ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಗಳನ್ನು ಸೇವೆಯಲ್ಲಿ ಮುಂದುವರೆಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ.vtu

Key words: Continue, guest lecturers, service, MLC,  K.Vivekananda

 

The post ಹಾಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಿ- ಕೆ.ವಿವೇಕಾನಂದ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಾ.28ಕ್ಕೆ ಒಳಮೀಸಲಾತಿ ಬಗ್ಗೆ ಸಭೆ: ಅಂದು ಸಮಸ್ಯೆ ಬಗೆಹರಿಯುತ್ತೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,14,2026 (www.justkannada.in): ಮಾರ್ಚ್ 28ಕ್ಕೆ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಬಗ್ಗೆ...

ഹോട്ടലുകള്‍ കല്‍ക്കരിയിലേക്കും വീടുകള്‍ക്ക് പി.എന്‍ജിയിലേക്കും മാറണം; എല്‍.പി.ജി ക്ഷാമം പരിഹരിക്കാന്‍ സര്‍ക്കാരിന്റെ പുതിയ നിര്‍ദേശം

ന്യൂദല്‍ഹി: ഇറാനെതിരായ ഇസ്രഈല്‍-അമേരിക്ക യുദ്ധത്തിന്റെ അനന്തരഫലമായി ഇന്ധന ക്ഷാമം രൂക്ഷമാവുന്ന സാഹചര്യത്തില്‍...

Mahmudullah: భారత్ చేతిలో ఆ ఓటమి ఇప్పటికీ మర్చిపోలేము.. ఆటగాళ్లందరం బోరున ఏడ్చేశాం.!

Mahmudullah: 2016 టీ20 వరల్డ్‌కప్‌ లో భారత్‌ తో జరిగిన మ్యాచ్‌...