30
August, 2026

A News 365Times Venture

30
Sunday
August, 2026

A News 365Times Venture

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

Date:

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್‍ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ಬಿಟ್ಟು ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಬಗ್ಗೆ ಟೀಕೆ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ.  ಡಿಕೆ ಶಿವಕುಮಾರ್ ಸಿಎಂ ಅನ್ನೋ ವಿಚಾರ ಮುಗಿದ ಅಧ್ಯಾಯ  ಸಿದ್ದರಾಮಯ್ಯ ಶಕ್ತಿಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ ಕಳೆದ ವರ್ಷದಂತೆ ಈಗಲೂ ಶಾಸಕರ ಜೊತೆ ಸಭೆ ನಡೆಸುತ್ತಿದ್ದಾರೆ ಅಷ್ಟೆ ಎಂದರು.

ಅಪರೇಷನ್ ಸಿಂಧೂರ ಕುರಿತು ನಿನ್ನೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ಕುರಿತು ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್,  ಪ್ರಧಾನಿ ಮೋದಿ ಯಾರಿಗಾದರೂ ಉತ್ತರ ಕೊಡುತ್ತಾರಾ ? ಅವರಿಗೆ ಪ್ರಶ್ನೆ ಕೇಳುವುದಕ್ಕೆ ಅವಕಾಶ ಇಲ್ಲ. ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ ಎನ್ನುವ ಸರ್ವಾಧಿಕಾರಿ ಧೋರಣೆ ಇದು. ಪುಲ್ವಾಮಾ ಘಟನೆ ಆಗಲು ವೈಫಲ್ಯ ಏನು ಅನ್ನೋದನ್ನ ಹೇಳುವುದೇ ಇಲ್ಲ. ನಮ್ಮ 40 ಸೈನಿಕರು ಹುತಾತ್ಮರಾಗಿದ್ದಕ್ಕೆ ವೈಫಲ್ಯವೇನು ಎನ್ನುವುದನ್ನೇ ಬಹಿರಂಗಪಡಿಸಿಲ್ಲ. ಪಹಲ್ಗಾಮ್‌ ದಾಳಿಯಲ್ಲೂ ಯಾವುದೇ ಸ್ಪಷ್ಟ ಉತ್ತರ ಬಂದಿಲ್ಲ. ಅಮೆರಿಕಾ ಅಧ್ಯಕ್ಷ ಟ್ರಂಪ್ ನಾನೇ ಯುದ್ಧ ನಿಲ್ಲಿಸಿದ್ದೆಂದು ಹೇಳಿದ್ದರು. ಪಾಕಿಸ್ತಾನದವರು ಭಾರತದ 5 ಜೆಟ್‌ ಗಳನ್ನು ಹೊಡೆದಿದ್ದೇವೆ ಎಂದರು. ಆದರೆ ಕೇಂದ್ರ ಸರ್ಕಾರ ಇದುವರೆಗೂ ಈ ಬಗ್ಗೆ ಎಂದೂ ಸ್ಪಷ್ಟಪಡಿಸಿಲ್ಲ ಎಂದು ಕಿಡಿಕಾರಿದರು.vtu

Key words: CM Siddaramaiah, DCM, DK Shivakumar, Minister, Dinesh Gundu Rao

The post ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇസ്രഈലി സ്ഥാപനവും വോക്‌സ്‌വാഗണും തമ്മിലെ സഹകരണം; കരാറിനെതിരെ ജര്‍മനിയില്‍ ഇടത് പാര്‍ട്ടികളുടെ പ്രതിഷേധം

ബെര്‍ലിന്‍: ഇസ്രയേല്‍ സര്‍ക്കാറിന്റെ ഉടമസ്ഥതയിലുള്ള പ്രതിരോധ സ്ഥാപനവുമായി സഹകരിക്കാനുള്ള വോക്‌സ്‌വാഗന്റെ നീക്കത്തിനെതിരെ...

ஆர்.எஸ்.எஸ்ஸின் நண்பர், விஷ்ணு ரெட்டியின் உறவினர்.. கிரண்குமார் ரெட்டி தமிழ்நாட்டின் ஆளுநரா?

தமிழ்நாட்டின் ஆளுநராக ஆந்திர முன்னாள் முதல்வர் கிரண்குமார் ரெட்டி நியமிக்கபட வாய்ப்புள்ளதாக...

“ಗೋದಿ ಮೀಡಿಯಾ “ ಟ್ಯಾಗ್‌ ಲೈನ್‌ ಕಳಚಲು ಸಾಮಾಜಿಕ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಿ: ಡಾ.ಯತೀಂದ್ರ.

  ಮೈಸೂರು, ಆ.29, 2026:  ದೇಶದಲ್ಲಿ ಮಾಧ್ಯಮದ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು...