1
May, 2026

A News 365Times Venture

1
Friday
May, 2026

A News 365Times Venture

ತುಮಕೂರು ಬಳಿ 19 ನವಿಲು ಸಾವು ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

Date:

ಬೆಂಗಳೂರು, ಆಗಸ್ಟ್, 4,2025 (www.justkannada.in):  ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಮಿಡಿಗೇಶಿಯ  ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಉಪ ಅರಣ್ಯ ಸಂರಕ್ಷಣಾಧಿಕಾರಿ- ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ.

ಮುಖ್ಯ ವನ್ಯಜೀವಿ ಪರಿಪಾಲಕರಿಗೆ ನೀಡಿರುವ ಸೂಚನೆಯಲ್ಲಿ ಅವರು, ಒಂದೂವರೆ ತಿಂಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ  ನಮ್ಮ ರಾಷ್ಟ್ರಪ್ರಾಣಿಯಾದ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಶಪ್ರಾಶನದಿಂದ ಮೃತಪಟ್ಟಿದ್ದವು, ನಂತರ ಕೋತಿಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದ ಘಟನೆ ನಡೆದಿತ್ತು. ಈಗ ನಮ್ಮ ರಾಷ್ಟ್ರಪಕ್ಷಿ ನವಿಲಿನ ಮಾರಣ ಹೋಮ ನಡೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ

ನವಿಲುಗಳ ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕೀಟನಾಶಕವನ್ನು ನವಿಲುಗಳನ್ನು ಸಾಯಿಸಲೆಂದೇ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕ ಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ಡಿಸಿಎಫ್ ನೇತೃತ್ವದ ತಂಡದಿಂದ ತನಿಖೆ ನಡೆಸಿ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮತ್ತು ನಿಯಮಾನುಸಾರ ಕ್ರಮ ಜರುಗಿಸಲು ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

ಜೊತೆಗೆ ಪರಿಶಿಷ್ಟ 1 ಮತ್ತು 2ರ ಯಾವುದೇ ವನ್ಯಜೀವಿ ಮೃತಪಟ್ಟರೂ ಆಡಿಟ್ ಮಾಡಿಸಿ ತತ್ ಕ್ಷಣವೇ ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಲು ಕ್ರಮ ವಹಿಸಲೂ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದ್ದಾರೆ.

Key words: Minister, Ishwar Khandre, investigation, 19 peacocks, death

The post ತುಮಕೂರು ಬಳಿ 19 ನವಿಲು ಸಾವು ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നെതന്യാഹുവിന് മാപ്പ് നല്‍കാന്‍ ഇസ്രഈല്‍ പ്രസിഡന്റിന് മേല്‍ ട്രംപിന്റെ കടുത്ത സമ്മര്‍ദം; ‘മാപ്പ് നല്‍കിയാല്‍ ഹെര്‍സോഗ് നാഷണല്‍ ഹീറോയാകും’

  വാഷിങ്ടണ്‍: അഴിമതിക്കേസുകളില്‍ വിചാരണ നേരിടുന്ന ഇസ്രഈല്‍ പ്രധാനമന്ത്രി ബെഞ്ചമിന്‍ നെതന്യാഹുവിന്...

'மோடியின் வசூல் வேட்டை தொடர்கிறது' – வணிக சிலிண்டர் விலை உயர்வுக்கு காங்கிரஸ் கண்டனம்

வணிகப் பயன்பாட்டிற்கான சிலிண்டர் விலை ஒரே நாளில் அதிரடியாக உயர்ந்துள்ளதால் பொதுமக்கள்...

Shocking: 55 ఏళ్ల గ్రామపెద్దతో లేచిపోయిన 22 ఏళ్ల భార్య..

Shocking: 22 ఏళ్ల వివాహిత మహిళ, తన కన్నా 33 ఏళ్ల...

ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ....