23
March, 2026

A News 365Times Venture

23
Monday
March, 2026

A News 365Times Venture

ಅಪಘಾತದಲ್ಲಿ ನವವಿವಾಹಿತೆ ಬಲಿ: ಮೊಮ್ಮಗಳ ಸಾವಿನ ಸುದ್ದಿ ಕೇಳಿ ಅಜ್ಜಿಯೂ ಮೃತ

Date:

ಬೆಂಗಳೂರು,ಆಗಸ್ಟ್,9,2025 (www.justkannada.in):  ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆಂದು  ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.

ಲಗ್ಗೆರೆ ನಿವಾಸಿ ಗೀತಾ (23) ಮೃತ ಮಹಿಳೆ. ಮೊಮ್ಮಗಳ ಸಾವಿನ ಸುದ್ದಿ ಕೇಳಿ  ಆಘಾತದಿಂದ ಗೀತಾ ಅವರ ಅಜ್ಜಿ ಠಾಕಮ್ಮ ಅವರೂ ಸಹ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಗೀತಾ ಪತಿ ಸುನೀಲ್ ​ಗೆ ಗಾಯಗಳಾಗಿವೆ.

ದಂಪತಿ ಕಳೆದ 3 ತಿಂಗಳ ಹಿಂದೆ ಮದುವೆಯಾಗಿದ್ದು,  ಲಗ್ಗೆರೆ ಬಳಿ 1 ವಾರದ‌ ಹಿಂದಷ್ಟೇ ಮನೆ ಮಾಡಿಕೊಂಡಿದ್ದರು. ಕಳೆದ ಭಾನುವಾರ ಹಾಲು ಉಕ್ಕಿಸಿದ್ದ ಪತಿ-ಪತ್ನಿ ಸಂಭ್ರಮಿಸಿದ್ದರು. ವರಮಹಾಲಕ್ಷ್ಮೀ ಹಬ್ಬಕ್ಕೆ ತವರು ಮನೆಗೆಂದು ಪತ್ನಿಯನ್ನ ಚಂದ್ರ ಲೇಔಟ್​ನಲ್ಲಿರುವ ಅವರ ಅಮ್ಮನ ಮನೆಗೆ ಪತಿ ಕರೆತಂದಿದ್ದರು.

ಈ ನಡುವೆ  ಹಬ್ಬದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನಲ್ಲಿರುವ ನಾದಿನಿ ಮನೆಗೆ ಕುಂಕುಮಕ್ಕಾಗಿ ಹೋಗುತ್ತಿದ್ದರು. ಈ ವೇಳೆ ಲಗ್ಗೆರೆ ಬಳಿ ಲಾರಿ ಡಿಕ್ಕಿಯಾಗಿ  ತಲೆಗೆ ಗಂಭೀರ ಗಾಯವಾದ ಕಾರಣ ಪತ್ನಿ ಗೀತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

Key words: Woman, dies, accident, Bangalore

The post ಅಪಘಾತದಲ್ಲಿ ನವವಿವಾಹಿತೆ ಬಲಿ: ಮೊಮ್ಮಗಳ ಸಾವಿನ ಸುದ್ದಿ ಕೇಳಿ ಅಜ್ಜಿಯೂ ಮೃತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..

ಬೆಂಗಳೂರು,ಮಾರ್ಚ್,23,2026 (www.justkannada.in):  ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು...

ഫ്രാന്‍സ് തദ്ദേശ തെരഞ്ഞെടുപ്പില്‍ തീവ്രവലതുപക്ഷത്തിന് തിരിച്ചടി; നഗരങ്ങളില്‍ മുഖ്യധാരാ പാര്‍ട്ടികളുടെ മുന്നേറ്റം

പാരീസ്: ഫ്രാന്‍സില്‍ നടന്ന നിര്‍ണ്ണായകമായ മുനിസിപ്പല്‍ തെരഞ്ഞെടുപ്പ് ഫലങ്ങള്‍ പുറത്തുവന്നപ്പോള്‍, തീവ്രവലതുപക്ഷത്തിന്റെ...

அதிமுக கூட்டணியின் தொகுதி பங்கீடு விவரம்; அதிமுக அலுவலகத்தில் டிடிவி! யார் யாருக்கு எவ்வளவு?

தமிழகத்தில் சட்டமன்றத் தேர்தல் நெருங்கிக்கொண்டிருக்கிறது. கட்சிகள், தொகுதிப் பங்கீடு பேச்சுவார்த்தைகளை நடத்தி...

Raghav Chadha: వినియోగదారుల డబ్బుకు విలువ ఎక్కడ? వాడని డేటా ఎక్కడికి పోతుంది..!

Raghav Chadha: రాజ్యసభ సభ్యుడు రాఘవ్ చద్దా ప్రస్తావించే ప్రతి అంశం...