11
March, 2026

A News 365Times Venture

11
Wednesday
March, 2026

A News 365Times Venture

ಹಾಡಹಗಲೇ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಮೊಬೈಲ್ ಕಿತ್ತುಕೊಂಡು ದರೋಡೆಕೋರ ಪರಾರಿ

Date:

ಬೆಂಗಳೂರು, ಆಗಸ್ಟ್​ 13,2025 (www.justkannada.in): ಹಾಡಹಗಲೇ ದರೋಡೆಕೋರನೋರ್ವ  ಪಿಜಿಗೆ ನುಗ್ಗಿ ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಹೆದರಿಸಿ ಲೈಂಗಿಕ ದೌರ್ಜನ್ಯವೆಸಗಿ ನಂತರ ಮೊಬೈಲ್​ ಕಿತ್ತುಕೊಂಡು ಪರಾರಿ  ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆಗಸ್ಟ್​ 11ರಂದು ಜುಡಿಷಿಯಲ್ ಲೇಔಟ್​ನ ಲೇಡಿಸ್ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ. ಬೆಸ್ಕಾಂನಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ಮಹಿಳೆ ಮೇಲೆಯೇ ಈ ದೌರ್ಜನ್ಯವೆಸಗಲಾಗಿದೆ.

15 ದಿನಗಳ ಹಿಂದಷ್ಟೇ ಮಹಿಳೆ ಜುಡಿಷಿಯಲ್ ಲೇಔಟ್​ ನ ಶಿವಾಸ್ ಲೇಡಿಸ್ ಪಿಜಿಗೆ ಸೇರಿಕೊಂಡಿದ್ದರು. ಆಗಸ್ಟ್​ 11ರಂದು ಮಧ್ಯಾಹ್ನ ಕೆಲಸ ಮುಗಿಸಿ ಪಿಜಿಯಲ್ಲಿನ 3ನೇ ಮಹಡಿಯಲ್ಲಿರುವ ತನ್ನ ರೂಮಿಗೆ ಆಗಮಿಸಿದ್ದರು.

ಈ ವೇಳೆ ಏಕಾಏಕಿ ಬಂದ ದರೋಡೆಕೋರ ಚಾಕು ಸಮೇತ  ಪಿಜಿಗೆ ನುಗ್ಗಿ ಮಹಿಳೆಯಿದ್ದ ರೂಮ್​​ ಡೋರ್ ಬಡೆದಿದ್ದಾನೆ. ಪಿಜಿಯವರು ಇರಬಹುದೆಂದು ಮಹಿಳೆ ಬಾಗಿಲು ತೆರೆದಿದ್ದಾರೆ.  ಈ ವೇಳೆ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿದ್ದ ಖದೀಮ, ದೌರ್ಜನ್ಯವೆಸಗಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಬಳಿಕ ಬೆಡ್​ ಮೇಲಿದ್ದ 2 ಮೊಬೈಲ್​ ಗಳು ತೆಗೆದುಕೊಂಡು ಪರಾರಿ ಆಗಿದ್ದಾನೆ. ಘಟನೆ ಕುರಿತು ಯಲಹಂಕ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Key words: Female officer, sexually, assault, Robber

The post ಹಾಡಹಗಲೇ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಮೊಬೈಲ್ ಕಿತ್ತುಕೊಂಡು ದರೋಡೆಕೋರ ಪರಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು...

അയ്യങ്കാളി ചിത്രത്തിന് മുന്നില്‍ മാലിന്യ സംഭരണി സ്ഥാപിച്ച് തിരുവനന്തപുരം കോര്‍പ്പറേഷന്‍; നീക്കം ചെയ്ത് പി.കെ.എസ് പ്രവര്‍ത്തകര്‍

തിരുവനന്തപുരം: കേരളത്തിന്റെ നവോത്ഥാന നായകന്‍ അയ്യങ്കാളിയുടെ ചിത്രത്തെ അവഹേളിക്കുന്ന നടപടിയുമായി ബി.ജെ.പി...

மதுரையில் வணிக சிலிண்டர் தட்டுப்பாடு: 3 நாள்களில் உணவகங்கள் மூடப்படும் அபாயம்! | கள நிலவரம் என்ன?

தமிழகத்தில் நிலவி வரும் வணிக பயன்பாட்டிற்கான எரிவாயு சிலிண்டர் தட்டுப்பாடு காரணமாக,...

AP News: ఏపీ ప్రజలకు శుభవార్త.. ఉగాది కానుకలుగా అన్నదాత సుఖీభవ, గృహ ప్రవేశాలు!

ఆంధ్రప్రదేశ్ రాష్ట్ర సచివాలయంలో ముఖ్యమంత్రి నారా చంద్రబాబు నాయుడు అధ్యక్షతన 6వ...