27
April, 2026

A News 365Times Venture

27
Monday
April, 2026

A News 365Times Venture

ಆಗಸ್ಟ್ 17 ರಂದು ವಿದೇಶ ವ್ಯಾಸಂಗದ ವಿಶೇಷ ಮೇಳ

Date:

ಬೆಂಗಳೂರು ಗ್ರಾಮಾಂತರ ಆಗಸ್ಟ್,14,2025 (www.justkannada.in): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಇಲ್ಲದೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ವಿದೇಶಿ ಅಧ್ಯಯನ ಮೇಳವನ್ನು ಮೊದಲ ಬಾರಿಗೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದೆ.

ಆಗಸ್ಟ್ 17 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಬೆಂಗಳೂರು ನಗರದ ಲಲಿತ್ ಅಶೋಕ ಹೋಟೆಲ್ ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದೆ. ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶಕ್ಕಾಗಿ  http://studyabroad.ksdckarnataka.com ನೋಂದಾಯಿಸಿಕೊಳ್ಳಬಹುದು.

ಉನ್ನತ ಶಿಕ್ಷಣ ಪಡೆಯಲು ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವವರಿಗೆ ಪ್ರೋತ್ಸಾಹ ಧನವನ್ನು ನೀಡಿ ಜೊತೆಗೆ ಉಚಿತ ವಿಮಾನ ಟಿಕೆಟ್ ಸೌಲಭ್ಯ ನೀಡಲಾಗುತ್ತದೆ.

ಎಕ್ಸ್ಪೋ ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ನೇರ ಸಂವಾದ, ವಿದ್ಯಾರ್ಥಿ ವೇತನ ಮತ್ತು ಅರ್ಹತಾ ಮೌಲ್ಯಮಾಪನ, ವೀಸಾ ಪ್ರಕ್ರಿಯೆ, ಹಣಕಾಸು ಯೋಜನೆ, ಆರೋಗ್ಯ ವಿಮೆ, ಭಾಷಾ ಪ್ರಾವೀಣ್ಯ ಮತ್ತು ಇತರೆ ವಿಷಯಗಳ ಬಗ್ಗೆ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ. ಇದರಲ್ಲಿ 10ಕ್ಕೂ ಹೆಚ್ಚು ದೇಶಗಳು, 50ಕ್ಕೂ ಅಧಿಕ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುತ್ತವೆ.

ಹೆಚ್ಚಿನ ಮಾಹಿತಿಗಾಗಿ 7338674791, 7338674792, 7338674794,73386 74798 ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Special ,Study, Abroad Fair, Bangalore

The post ಆಗಸ್ಟ್ 17 ರಂದು ವಿದೇಶ ವ್ಯಾಸಂಗದ ವಿಶೇಷ ಮೇಳ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാലി സൈനിക ഭരണകൂടത്തിന് വന്‍ തിരിച്ചടി; പ്രതിരോധമന്ത്രി കമാറ ബോംബാക്രമണത്തില്‍ കൊല്ലപ്പെട്ടു

ബമാക്കോ: മാലിയിലെ സൈനിക ഭരണകൂടത്തിന് വന്‍ തിരിച്ചടി. ഭരണകൂടത്തിന് പ്രഹരമേല്‍പ്പിച്ച് നടന്ന...

FBI: குடிபோதையில் தள்ளாடும் அமெரிக்க FBI இயக்குநர் காஷ் பட்டேல்? குற்றச்சாட்டும் பின்னணியும் என்ன?

அமெரிக்காவின் எப்.பி.ஐ இயக்குனராக இருப்பவர் காஷ் பட்டேல். பணி நேரத்தில்...

FASTag Major Changes: ఫాస్టాగ్‌ విధానంలో సంచలన మార్పులు.. నితిన్‌ గడ్కరీ కీలక వ్యాఖ్యలు

FASTag Major Changes: దేశవ్యాప్తంగా హైవేలపై ప్రయాణించే వాహనదారులకు కేంద్ర ప్రభుత్వం...

മുണ്ടത്തിക്കോട് വെടിക്കെട്ട് ദുരന്തം: അന്വേഷണം ഒരാഴ്ചയ്ക്കുള്ളില്‍ പൂര്‍ത്തിയാകുമെന്ന് ഡി.ജി.പി

തിരുവനന്തപുരം: മുണ്ടത്തിക്കോട് വെടിക്കെട്ട് പുരയിലുണ്ടായ സ്‌ഫോടനത്തെക്കുറിച്ചുള്ള അന്വേഷണം പുരോഗമിക്കുകയാണെന്നും അപകടകാരണം ഒരാഴ്ചയ്ക്കുള്ളില്‍...