27
April, 2026

A News 365Times Venture

27
Monday
April, 2026

A News 365Times Venture

ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು

Date:

ಬೆಂಗಳೂರು, ಆಗಸ್ಟ್​ 16,2025 (www.justkannada.in) :  ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.

ಮದನ್ ಸಿಂಗ್ ಮೃತಪಟ್ಟ ವ್ಯಕ್ತಿ. ಮತ್ತೊಂದು ಮೃತದೇಹವನ್ನ ಹೊರತೆಗೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

ಸಂದೀಪ್ ಮತ್ತು ಬಾಲಕೃಷ್ಣ ಎಂಬುವವರ ಒಡೆತನದ ಒಟ್ಟು ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನೆಲಮಹಡಿ ಸೇರಿ ಎರಡು ಮಹಡಿಯಲ್ಲಿ ಗೋಡೌನ್ ಇದೆ. ಮೊದಲ ಮಹಡಿಯಲ್ಲಿ ಮೂವರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮೂರನೇ ಮಹಡಿಯಲ್ಲಿ ಮದನ್ ಕುಮಾರ್ ಪತ್ನಿ ಸಂಗೀತಾ, ಮಕ್ಕಳಾದ ವಿಹಾನ್ ಹಾಗೂ ನಿತೇಶ್​​ ವಾಸವಿದ್ದರು. ಘಟನೆಯಲ್ಲಿ ಮದನ್ ಸಿಂಗ್ ಸಾವನ್ನಪ್ಪಿದ್ದಾರೆ.

ನಿನ್ನೆ ವಿಲ್ಸನ್ ಗಾರ್ಡ್ ಬಳಿ ಸಿಲಿಂಡರ್ ಸ್ಪೋಟಗೊಂಡು ಓರ್ವ 10 ವರ್ಷದ ಬಾಲಕ ಮೃತಪಟ್ಟಿ ಹಲವರಿಗೆ ಗಾಯವಾಗಿತ್ತು. ಇದೀಗ ಈ ಬೆನ್ನಲ್ಲೆ ಮತ್ತೊಂದು ದುರಂತ ನಡೆದಿದೆ.

Key words: Fire, plastic mat shop, Two dead, Bangalore

The post ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാലി സൈനിക ഭരണകൂടത്തിന് വന്‍ തിരിച്ചടി; പ്രതിരോധമന്ത്രി കമാറ ബോംബാക്രമണത്തില്‍ കൊല്ലപ്പെട്ടു

ബമാക്കോ: മാലിയിലെ സൈനിക ഭരണകൂടത്തിന് വന്‍ തിരിച്ചടി. ഭരണകൂടത്തിന് പ്രഹരമേല്‍പ്പിച്ച് നടന്ന...

FBI: குடிபோதையில் தள்ளாடும் அமெரிக்க FBI இயக்குநர் காஷ் பட்டேல்? குற்றச்சாட்டும் பின்னணியும் என்ன?

அமெரிக்காவின் எப்.பி.ஐ இயக்குனராக இருப்பவர் காஷ் பட்டேல். பணி நேரத்தில்...

FASTag Major Changes: ఫాస్టాగ్‌ విధానంలో సంచలన మార్పులు.. నితిన్‌ గడ్కరీ కీలక వ్యాఖ్యలు

FASTag Major Changes: దేశవ్యాప్తంగా హైవేలపై ప్రయాణించే వాహనదారులకు కేంద్ర ప్రభుత్వం...

മുണ്ടത്തിക്കോട് വെടിക്കെട്ട് ദുരന്തം: അന്വേഷണം ഒരാഴ്ചയ്ക്കുള്ളില്‍ പൂര്‍ത്തിയാകുമെന്ന് ഡി.ജി.പി

തിരുവനന്തപുരം: മുണ്ടത്തിക്കോട് വെടിക്കെട്ട് പുരയിലുണ്ടായ സ്‌ഫോടനത്തെക്കുറിച്ചുള്ള അന്വേഷണം പുരോഗമിക്കുകയാണെന്നും അപകടകാരണം ഒരാഴ്ചയ്ക്കുള്ളില്‍...