27
August, 2026

A News 365Times Venture

27
Thursday
August, 2026

A News 365Times Venture

ಬಿಜೆಪಿಯವರಿಂದ ರಾಜಕೀಯ: ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಆಗಸ್ಟ್,16,2025 (www.justkannada.in):  ಧರ್ಮಸ್ಥಳ ಚಲೋ ಅಭಿಯಾನ ನಡೆಸುತ್ತಿರುವ ಬಿಜೆಪಿ ವಿರುದ್ದ  ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದು, ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಧರ್ಮಸ್ಥಳದ ಕುರಿತು ಅಪಪ್ರಚಾರ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಧರ್ಮಸ್ಥಳ ಚಲೋ  ನಡಸುತ್ತಿದ್ದಾರೆ.  ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಸ್ ಐಟಿ ರಚನೆ ಮಾಡಿದಾಗ ತನಿಖೆ ಆರಂಭಕ್ಕೂ ಮೊದಲು ಬಿಜೆಪಿಯವರು ಧರ್ಮಸ್ಥಳದ ಕುರಿತು ಯಾಕೆ ಮಾತನಾಡಿಲ್ಲ. ಬಿಜೆಪಿಯವರು ಈಗ ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿಯವರು ಹಿಂದುತ್ವ ತಮ್ಮ ಮನೆ ಆಸ್ತಿ ಅಂತ ಅಂದುಕೊಂಡಿದ್ದಾರೆ. ಹಿಂದುತ್ವ ಯಾರ ಆಸ್ತಿಯೂ ಅಲ್ಲ ಅವರವರ ಭಕ್ತಿ ಹಾಗೂ ನಂಬಿಕೆಯ ಮೇಲೆ ಇದೆ ಎಂದು ಹರಿಹಾಯ್ದರು.

ಬಿಜೆಪಿಯವರು ರಾಜಕಾರಣ ಬಿಟ್ಟು ಬೇರೇನು ಮಾತಾಡಲ್ಲ. ಬಿಜೆಪಿಗೆ ಧರ್ಮಸ್ಥಳದ ಬಗ್ಗೆ ಪ್ರೀತಿ ಇಲ್ಲ ಬಿಜೆಪಿ ಅವರಿಗೆ ರಾಜಕಾರಣ ಮಾಡುವುದಕ್ಕೆ ಧರ್ಮಸ್ಥಳ ಬೇಕು. ಆದರೆ ನಮಗೆ ರಾಜಕಾರಣ ಮಾಡಲು ಧರ್ಮಸ್ಥಳ ಬೇಡ ಎಂದು ಚಾಟಿ ಬೀಸಿದರು.

Key words: Darmasthala case, BJP, Politics, DCM, DK Shivakumar

The post ಬಿಜೆಪಿಯವರಿಂದ ರಾಜಕೀಯ: ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ...

നേപ്പാള്‍ പ്രളയം: കേരളത്തില്‍ നിന്നുള്ളവര്‍ക്കായി ഹെല്‍പ്‌ഡെസ്‌ക് തുടങ്ങി

തിരുവനന്തപുരം: നേപ്പാളിലുണ്ടായ മിന്നല്‍ പ്രളയവുമായി ബന്ധപ്പെട്ട് കേരളീയര്‍ക്ക് അടിയന്തിര സഹായവും സേവനങ്ങളും...

"சட்டமன்றத்தில் லாவணி கச்சேரி நடந்துக்கொண்டிருக்கிறது" – தவெக, திமுக-வை தாக்கும் பெ.சண்முகம்

மார்க்ஸிஸ்ட் கம்யூனிஸ்ட் மாநிலச் செயலாளர் பெ.சண்முகம் செய்தியாளர்களைச் சந்தித்து பேசியிருக்கிறார். அப்போது,...

Karnataka: ఆకస్మిక తనిఖీలో షాకింగ్ సీన్.. ఆస్పత్రి రూమ్‌లో ప్రియురాలితో అడ్డంగా బుక్కైన..!

కర్ణాటకలో ఓ న్యాయమూర్తికి షాకింగ్ ఘటన ఎదురైంది. ఆస్పత్రిలోని ఓ గదిలో...