25
April, 2026

A News 365Times Venture

25
Saturday
April, 2026

A News 365Times Venture

ಬೋಧಕೇತರ ಹುದ್ದೆಗೆ ಪ್ರೌಢಶಾಲಾ ಶಿಕ್ಷಕರು..!

Date:

ಬೆಂಗಳೂರು,ಆಗಸ್ಟ್,22,2025 (www.justkannada.in):  ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧನೆ ಮಾಡುವುದನ್ನು ಹೊರತುಪಡಿಸಿ ಬೇರೆ  ಕಾರ್ಯಕ್ಕೆ ನಿಯೋಜಿಸಬಾರದೆಂದು ಸುಪ್ರೀಂ ಕೋರ್ಟ್ ಆದೇಶವೇ ಇದೆ.  ಆದರೆ ಇದೀಗ ಬೋಧಕೇತರ ಹುದ್ದೆಗೆ ಪ್ರೌಢಶಾಲಾ ಶಿಕ್ಷಕರನ್ನ ನೇಮಕ ಮಾಡಿ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚಿಗೆ ಇಲಾಖೆಗೆ ಪ್ರಧಾನ ಕಾರ್ಯದರ್ಶಿಯಾಗಿ ಬಂದಿರುವ ರಶ್ಮಿ ಮಹೇಶ್  ಅವರು ಶಿಕ್ಷಕರನ್ನು ಬೋಧನೆಯಲ್ಲಿ ತೊಡಗಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಆದರೆ ದಿನಾಂಕ 20/08/2025 ರಂದು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ವರ್ಗಾವಣೆ ಆದೇಶ ಸುಪ್ರೀಂ ಕೋರ್ಟ್ ಆದೇಶವನ್ನೂ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರ ಆಶಯವನ್ನೂ ಗಾಳಿಗೆ ತೂರಿದಂತೆ ಕಾಣುತ್ತಿದೆ.

ಜಿಲ್ಲೆಗಳ ಡಯಟ್ ಹಾಗೂ ಸಿಟಿಇ ಗಳಲ್ಲಿರುವ ತಂತ್ರಜ್ಞರು, ತಾಂತ್ರಿಕ ಸಹಾಯಕರು, ಕಾರ್ಯಕ್ರಮ ಸಹಾಯಕರು , ಅಂಕಿ ಸಂಖ್ಯಾ ಸಹಾಯಕರು, ಮುಂತಾದ ಬೋಧಕೇತರ ಹುದ್ದೆಗಳಿಗೆ ರಾಜ್ಯದ ವಿವಿಧ ಪ್ರೌಢಶಾಲಾ ಸಹ ಶಿಕ್ಷಕರನ್ನು ವರ್ಗಾವಣೆ ಮಾಡಿಲಾಗಿದ್ದು,  ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಈ ವರ್ಗಾವಣೆಗಳು ಪ್ರಸ್ತುತ SSLC ವಿದ್ಯಾರ್ಥಿಗಳು ಅರ್ಧ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಲ್ಲವೇ? ಈ ಬಗ್ಗೆ ಇಲಾಖೆಯ ಮಂತ್ರಿಗಳು , ಪ್ರಧಾನ ಕಾರ್ಯದರ್ಶಿಗಳು ಗಮನಹರಿಸುವರೇ? ಎಂದು ಕಾದು ನೋಡಬೇಕಿದೆ.

Key words: High school, teachers, non-teaching, positions

The post ಬೋಧಕೇತರ ಹುದ್ದೆಗೆ ಪ್ರೌಢಶಾಲಾ ಶಿಕ್ಷಕರು..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അവര്‍ ഇപ്പോഴും സൂര്യനെ വരയ്ക്കുന്നു’; ദല്‍ഹിയില്‍ മിനാബ് പെണ്‍കുട്ടികളുടെ കലാസൃഷ്ടികളുടെ പ്രദര്‍ശനം

  ന്യൂദല്‍ഹി: അമേരിക്കയുടെയും ഇസ്രഈലിന്റെയും ആക്രമണത്തിന്റെ ഇരകളായ കുരുന്നുകളുടെ സ്വപ്‌നങ്ങളും കണ്ണീരും...

Dwcra Group: డ్వాక్రా మహిళలకు గుడ్ న్యూస్.. 22 లక్షల మంది అకౌంట్లోకి డబ్బులు..

ఆంధ్రప్రదేశ్‌లోని డ్వాక్రా మహిళల చిరకాల నిరీక్షణకు తెరపడింది. ‘అభయహస్తం’ పథకం కింద...

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ...