ಬೆಂಗಳೂರು,ಆಗಸ್ಟ್,22,2025 (www.justkannada.in): ಧರ್ಮಸ್ಥಳ ಬಗ್ಗೆ ಅಪಪ್ರಚಾರವನ್ನ ಖಂಡಿಸಿ ರಾಜ್ಯಾದ್ಯಂತ ‘’ಧರ್ಮಯುದ್ಧ” ಹೆಸರಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಎಸ್ ಐಟಿ ತನಿಖೆಯ ನೆಪದಲ್ಲಿ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಹಾಗೂ ಇದಕ್ಕೆ ಬೆಂಬಲವಾಗಿ ನಿಂತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಅವರ ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಧರ್ಮದ ಉಳಿವಿಗಾಗಿ “ಧರ್ಮಯುದ್ಧ” ಹೆಸರಿನಲ್ಲಿ ಪ್ರತಿಭಟನೆ ನಡೆಯಲಿದೆ.
ಕಾಂಗ್ರೆಸ್ ಮತ್ತು ಎಡಪಂಥೀಯರ ಷಡ್ಯಂತ್ರದ ವಿರುದ್ಧ ಸಮಾಜವೂ ಜಾಗೃತಗೊಳ್ಳಬೇಕಾಗಿದೆ. ಹಿಂದೂ ಶ್ರದ್ಧಾ ಕೇಂದ್ರಗಳನ್ನು ಅನುಮಾನಿಸುವ, ಅವಮಾನಿಸುವ ಪ್ರವೃತ್ತಿ ಇಂದು ನಿನ್ನೆಯದಲ್ಲ, ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಎಸ್ ಐಟಿ ರಚಿಸಬೇಕೆಂದು ಹೇಳಿದ್ದೇ ನಗರ ನಕ್ಸಲರು. ನಂತರದಲ್ಲಿ ನಡೆದ ಪುಣ್ಯಕ್ಷೇತ್ರದ ತೇಜೋವಧೆ, ಅಪಪ್ರಚಾರಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣ. ಇದರ ವಿರುದ್ಧ ಬಿಜೆಪಿ ಎಲ್ಲಾ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
Key words: Dharmasthala, BJP, decides, protest, across, state
The post ಧರ್ಮಸ್ಥಳದ ಬಗ್ಗೆ ಅಪಪ್ರಚಾರ : ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





