13
March, 2026

A News 365Times Venture

13
Friday
March, 2026

A News 365Times Venture

ತಾಯಿ ಹಾಲಿನ ಬ್ಯಾಂಕ್ ಸ್ಥಾಪನೆಗೆ ಸ್ಥಳ ಪರಿಶೀಲಿಸಿದ ಜಿ.ಪಂ CEO

Date:

ಮಂಡ್ಯ,ಆಗಸ್ಟ್,26,2025 (www.justkannada.in): ತಾಯಿ ಹಾಲು ಕೊರತೆಯುಳ್ಳ ಮಕ್ಕಳಿಗೆ ಬೇರೆ ತಾಯಂದಿರಿಂದ ಸುರಕ್ಷಿತವಾಗಿ ಸಂಗ್ರಹಿಸಲ್ಪಟ್ಟ ಹಾಲನ್ನು ನೀಡುವುದರಿಂದ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಬಹುದಾಗಿದ್ದು, ಈ ನಿಟ್ಟಿನಲ್ಲಿ  ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ತಾಯಿ ಹಾಲಿನ ಬ್ಯಾಂಕ್ ಸ್ಥಾಪನೆಗೆ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿದ ಸಿಇಒ ಕೆಆರ್ ನಂದಿನಿ ಅವರು, ತಾಯಿ ಹಾಲಿನ ಬ್ಯಾಂಕ್ ಮತ್ತು Midwifery Led Labour Care Unit ಸ್ಥಾಪಿಸಲು ಸೂಕ್ತವಾದ ಸ್ಥಳ ಲಭ್ಯವಿರುವ ಬಗ್ಗೆ ಹಾಗೂ ಸದರಿ ಸ್ಥಳವು ಪಾರಂಪರಿಕ ಕಟ್ಟಡವಾಗಿರುವುದರಿಂದ ಯಾವುದೇ ಹಾನಿಯಾಗದಂತೆ ತಾಯಿ ಹಾಲಿನ ಬ್ಯಾಂಕ್ ಮತ್ತು MLCU ಘಟಕಗಳನ್ನು ಸ್ಥಾಪಿಸಲು ಪರಿಶೀಲನೆ ನಡೆಸಿದರು.

ತಾಯಿ ಹಾಲಿನ ಬ್ಯಾಂಕ್ ಸಮಾಲೋಚನಾ ಕೊಠಡಿ, ಶುಶ್ರೂಷಕಿಯರ ಕೊಠಡಿ, ಸ್ಟೆರಲೈಜ್ ಏರಿಯಾ, ಎಕ್ಸ್ ಪ್ರೆಷನ್ ಕೊಠಡಿ, ನವಜಾತ ಶಿಶುಗಳ ನಿಗಾ ಘಟಕ, ಡೀಪ್ ಪ್ರೀಜರ್, ಮಿಲ್ಕ್ ಅನಲೈಜರ್, ಬಯೋ ಮೆಡಿಕಲ್ ವೇಸ್ಟ್ ಘಟಕ, ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಶೌಚಾಲಯವನ್ನು ಒಳಗೊಂಡಿರುತ್ತದೆ.

MLCU ಘಟಕದಲ್ಲಿ ಕಡಿಮೆ ಅಪಾಯವಿರುವ ಹೆರಿಗೆಗಳನ್ನು ಸ್ವಾಭಾವಿಕವಾಗಿ ಹೆರಿಗೆ ಮಾಡಿಸಲು ಅಗತ್ಯವಿರುವ ವಾರ್ಡ್ ಗಳು, ನವಜಾತ ಶಿಶುಗಳ ತೀವ್ರ ನಿಗಾ ಘಟಕ, ಶೌಚಾಲಯಗಳು, ವ್ಯಾಯಮ ಮಾಡಲು ಅಗತ್ಯ ಪರಿಕರಗಳು ಸೇರಿದಂತೆ ಇನ್ನಿತರೆ ಘಟಕಗಳನ್ನು ಒಳಗೊಂಡಿರಲಿದೆ ಎಂದು ಹೇಳಿದರು.

ಶಿಶು ಮರಣ ಪ್ರಮಾಣ ಮತ್ತು ತಾಯಿ ಮರಣ ಪ್ರಮಾಣವನ್ನು ತಡೆಗಟ್ಟಲು ತಾಯಿ ಹಾಲಿನ ಬ್ಯಾಂಕ್ ಮತ್ತು MLCU ಘಟಕಗಳು ಅತ್ಯಗತ್ಯವಾಗಿದ್ದು, ತಾಯಿ ಹಾಲು ದೊರೆಯದ ನವಜಾತ ಶಿಶುಗಳಿಗೆ ಸಂಗ್ರಹಿಸಿದ ಹಾಲು ಪೂರೈಸುವುದರಿಂದ ಮಕ್ಕಳ ಜೀವ ಉಳಿಸಬಹುದಾಗಿದ್ದು, ಹಾಗೂ ಕಡಿಮೆ ಅಪಾಯವಿರುವ ಹೆರಿಗೆಗಳನ್ನು ಪ್ರತ್ಯೇಕಗೊಳಿಸಿ ಹೆಚ್ಚು ಅಪಾಯವಿರುವ ಹೆರಿಗೆಗಳ ಬಗ್ಗೆ ತೀವ್ರ ನಿಗಾ ಇಡುವುದರಿಂದ ತಾಯಿ ಮರಣ ಪ್ರಮಾಣವನ್ನು ತಗ್ಗಿಸುವ ಮೂಲಕ ಸ್ವಾಭಾವಿಕ ಹೆರಿಗೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಿಳಿಸಿದರು.

ಇದೇ  ಸಂದರ್ಭದಲ್ಲಿ ಮಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ನರಸಿಂಹ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ನಾಗರಾಜು, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ ಡಾ. ಮನೋಹರ್, ಶಿಶು ವೈದ್ಯರಾದ ಡಾ. ಚೇತನ್ ಸೇರಿದಂತೆ ಇತರರು ಹಾಜರಿದ್ದರು.

Key words: Mandya ZP, CEO, inspects, mother’s milk bank

The post ತಾಯಿ ಹಾಲಿನ ಬ್ಯಾಂಕ್ ಸ್ಥಾಪನೆಗೆ ಸ್ಥಳ ಪರಿಶೀಲಿಸಿದ ಜಿ.ಪಂ CEO appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ...

ഞെട്ടിപ്പിക്കുന്ന സംഭവം, ഉടന്‍ സമഗ്രമായ അന്വേഷണം നടത്തണം; ഫാറൂഖ് അബ്ദുല്ലക്ക് നേരെയുണ്ടായ വധശ്രമത്തില്‍ എം.എ. ബേബി

ന്യൂദല്‍ഹി: ജമ്മു കശ്മീര്‍ മുന്‍ മുഖ്യമന്ത്രി ഫാറൂഖ് അബ്ദുല്ലക്ക് നേരെയുണ്ടായ വധശ്രമം...

'6 தொகுதிகள் கொடுத்தே ஆகணும்' – கறார் காட்டும் கம்யூனிஸ்டுகள்; கைவிரித்த திமுக!

கம்யூனிஸ்ட் கட்சிகளுடனான தி.மு.க-வின் தொகுதி பங்கீட்டு பேச்சுவார்த்தையில் தொடர் இழுபறி நீடிக்கிறது....