7
March, 2026

A News 365Times Venture

7
Saturday
March, 2026

A News 365Times Venture

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Date:

ಬೆಂಗಳೂರು,ಆಗಸ್ಟ್,28,2025 (www.justkannada.in) :ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ದಿನಾಂಕ: 22.08.2025 ರಂದು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳು ಇದ್ದಲ್ಲಿ, 07 ದಿನಗಳ ಒಳಗೆ ನೀಡಲು ಕೋರಲಾಗಿತ್ತು.

ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ/ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು ದಿನಾಂಕ: 01.09.2025 ರ ಸಂಜೆ 5.00 ಘಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಈ ಮೂಲಕ ಪ್ರಕಟಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬ‌ರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.

ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ,ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ,  ವಸಂತ ನಗರ,ಬೆಂಗಳೂರು ಅಥವಾ kscbcb@gmail.com  ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ.ಹೆಚ್ಚಿನ‌ವಿವರಗಳಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Key words: Social Educational Survey,  Expansion, period, information

The post ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು...

യു.എസ് താവളങ്ങള്‍ നിങ്ങള്‍ക്ക് സംരക്ഷണമല്ല, ഭീഷണി; ഇസ്രഈലിന് വേണ്ടി അറബ് രാഷ്ട്രങ്ങളെ ഉപയോഗിക്കുകയാണ്: റഷ്യ

മോസ്‌കോ: പേര്‍ഷ്യന്‍ ഉള്‍ക്കടലില്‍ സ്ഥിതി ചെയ്യുന്ന യു.എസ് സൈനിക താവളങ്ങള്‍ പശ്ചിമേഷ്യയിലെ...

மாவட்டம் Vs வாரிசு; அண்ணா நகருக்குக் குறிவைக்கும் இருவர்! யாரை டிக் அடிக்கப் போகிறார் மாப்பிள்ளை?

உடன்பிறப்புகளிடம் விருப்ப மனுக்களை வாங்கி முடித்திருக்கிறது அறிவாலயம். கருணாநிதி போட்டியிட்ட சென்னையின்...