5
May, 2026

A News 365Times Venture

5
Tuesday
May, 2026

A News 365Times Venture

ಈ ಬಾರಿ ದಸರಾ ‘ದೀಪಾಲಂಕಾರ, ಡ್ರೋಣ್ ಶೋ’ ಮತ್ತಷ್ಟು ಆಕರ್ಷಣೀಯ- ಮುನಿಗೋಪಾಲ ರಾಜು

Date:

ಮೈಸೂರು,ಸೆಪ್ಟಂಬರ್,4,2025 (www.justkannada.in): ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ದೀಪಾಲಂಕಾರ ಮತ್ತು ಡ್ರೋಣ್ ಶೋ ವನ್ನ ಮತ್ತಷ್ಟು ಆಕರ್ಷಣೀಯವಾಗಿ ಮಾಡಬೇಕೆಂದು ಯೋಜನೆ ರೂಪಿಸಿಕೊಂಡಿದ್ದೇವೆ ಎಂದು ಸೆಸ್ಕ್ ನ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲ ರಾಜು ತಿಳಿಸಿದರು.

ಇಂದು ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಸೆಸ್ಕ್ ನ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲ ರಾಜು ಅವರು, ಈ ಬಾರಿಯ ದಸರಾ ಮಹೋತ್ಸವದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಮತ್ತಷ್ಟು ಮೆರಗು ನೀಡಲು ಸೆಸ್ಕ್ ಮುಂದಾಗಿದೆ. ಅರಮನೆ ದೀಪಾಲಂಕಾರಕ್ಕೆ ಪೂರಕವಾದ ಬಣ್ಣದಲ್ಲಿ ಮೈಸೂರು ನಗರದ ದೀಪಗಳು ಜಗಮಗಿಸಲಿವೆ.  ಕಳೆದ ಬಾರಿಯಂತೆ ಈ ಬಾರಿಯೂ ಸುಮಾರು 136 ಕಿ.ಮೀ ರಸ್ತೆಗಳವರೆಗೆ ದೀಪಾಲಂಕಾರ ಮಾಡಲಾಗುತ್ತದೆ.  ಸುಮಾರು 60ರಿಂದ 70 ಪ್ರತಿಕೃತಿಗಳನ್ನ ದೀಪಾಲಂಕಾರದಲ್ಲಿ ನಿರ್ಮಿಸುತ್ತಿದ್ದೇವೆ. ಈ ಬಾರಿ ದೀಪಾಲಂಕಾರದಲ್ಲಿ ವಿಶೇಷ ಅಂದರೆ ಕೊಲ್ಕತ್ತಾ ಮಾದರಿಯ ಮೂವಿಂಗ್ ಲೈಟ್ಸ್ ಪರಿಕಲ್ಪನೆ. ಬೇರೆ ಬೇರೆ ಕಡೆಗಳಿಂದಲೂ ಆಕರ್ಷಣಿಯ ದೀಪಗಳನ್ನ ತರಿಸಲಾಗುತ್ತದೆ. ಈ ಸಾರಿಯ ದೀಪಾಲಂಕಾರ ಅತ್ಯಾಕರ್ಷಕವಾಗಿರುತ್ತದೆ ಎಂದರು.

ಹಾಗೆಯೇ ದಸರಾ ಮಹೋತ್ಸವದಲ್ಲಿ ಡ್ರೋನ್ ಶೋ ಅಬ್ಬರ ಹೆಚ್ಚಾಗಲಿದೆ. ಕಳೆದ ವರ್ಷ 1500 ಡ್ರೋಣ್ ಉಪಯೋಗಿಸಿದ್ದವು. ಈ ಬಾರಿ 3 ಸಾವಿರ ಡ್ರೋಣ್ ಗಳನ್ನ ಬಳಸಿ ಬನ್ನಿಮಂಟಪದಲ್ಲಿ ಡ್ರೋಣ್ ಶೋ ಮಾಡುತ್ತಿದ್ದೇವೆ . ತಾಯಿ ಚಾಮುಂಡೇಶ್ವರಿ, ದಸರಾ ಅಂಬಾರಿ ವಿವಿಧ ಆಕೃತಿಗಳನ್ನ ಮೂಡಿಸಲಾಗುತ್ತದೆ. . ಈ ಕಾಮಗಾರಿಗಳಿಗೆ 9 ರಿಂದ 10 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಮುನಿಗೋಪಾಲ ರಾಜು ತಿಳಿಸಿದರು.

Key words: Mysore  Dasara, Lighting, Drone Show, Munigopala Raju

The post ಈ ಬಾರಿ ದಸರಾ ‘ದೀಪಾಲಂಕಾರ, ಡ್ರೋಣ್ ಶೋ’ ಮತ್ತಷ್ಟು ಆಕರ್ಷಣೀಯ- ಮುನಿಗೋಪಾಲ ರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സ്റ്റാലിന് പിറകെ മമതയും; ബി.ജെ.പി തരംഗത്തിൽ ദീദിക്കും കാലിടറി

കൊൽക്കത്ത: പശ്ചിമ ബംഗാൾ മുഖ്യമന്ത്രി മമത ബാനർജി ഭവാനിപുർ മണ്ഡലത്തിൽ ബി.ജെ.പി...

32 திமுக அமைச்சர்களில் 15 பேர் அவுட்; சபாநாயகரும் தோல்வி! – Minister Candidates Result Details!

தமிழ்நாடு சட்டமன்றத் தேர்தலில் தற்போதுவரை தமிழக வெற்றிக்கழகம் முன்னிலை பெற்று வருகிறது....

MI Vs LSG: ఆకాశమే హద్దుగా చెలరేగిన రోహిత్ శర్మ.. ఆ రికార్డులన్నీ పటాపంచల్..

ఐపీఎల్ 2026లో భాగంగా లక్నో సూపర్ జెయింట్స్‌తో జరిగిన 47వ మ్యాచ్‌లో...

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ...