22
April, 2026

A News 365Times Venture

22
Wednesday
April, 2026

A News 365Times Venture

ಹಸೆಮಣೆ ಏರಬೇಕಿದ್ದ ಜೋಡಿ  ಅಪಘಾತದಲ್ಲಿ ದುರ್ಮರಣ

Date:

ಶಿವಮೊಗ್ಗ, ಸೆಪ್ಟೆಂಬರ್, 11,2025 (www.justkannada.in):  ಕೆಲವು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಬೈಕ್ ಮತ್ತು ಒಮ್ನಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್​ ನಲ್ಲಿ ಈ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ (20) ಮತ್ತು ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ್ರ (25) ಮೃತಪಟ್ಟವರು.

ಆಗಸ್ಟ್  ನಲ್ಲಿ ರೇಖಾ, ಬಸವನಗೌಡ ನಿಶ್ಚಿತಾರ್ಥವಾಗಿತ್ತು. ಮಳೆಯ ಕಾರಣಕ್ಕೆ ಮದುವೆಯನ್ನು ಮುಂದೂಡಿದ್ದ 2 ಕುಟುಂಬಸ್ಥರು, ಡಿಸೆಂಬರ್ ​​ನಲ್ಲಿ ಇಬ್ಬರ ಮದುವೆಗೆ ದಿನಾಂಕ ನಿಗದಿ ಮಾಡಿದ್ದರು.  ಈ ಮಧ್ಯೆ ಜೋಡಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಓಮ್ನಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಈ ಕುರಿತು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: accident, Bike, Shimoga,  couple, death

The post ಹಸೆಮಣೆ ಏರಬೇಕಿದ್ದ ಜೋಡಿ  ಅಪಘಾತದಲ್ಲಿ ದುರ್ಮರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്തിനാണ് തീകൊണ്ട് കളിക്കുന്ന ഇത്തരം പൂരങ്ങള്‍; വെടിക്കെട്ട് ദുരന്തത്തില്‍ ആര്‍. ശ്രീലേഖ

തിരുവനന്തപുരം: തൃശ്ശൂര്‍മുണ്ടത്തിക്കോട് വെടിക്കെട്ട് അപകടത്തിന്റെ പശ്ചാത്തലത്തില്‍ പൂരങ്ങളിലെ അപകടകരമായ ആഘോഷങ്ങള്‍ക്കെതിരെ വിമര്‍ശനവുമായി...

தமிழகத்தில் பறக்கும் படை வேட்டையில் சிக்கியது இத்தனை கோடிகளா? – அர்ச்சனா பட்நாயக் வெளியிட்ட தகவல்

தமிழ்நாட்டில் இதுவரை பறிமுதல் செய்யப்பட்ட பரிசுப்பொருட்கள் மற்றும் பணம் குறித்த விவரங்களை...

Kharge vs BJP: మోడీ టెర్రరిస్ట్.. ఖర్గే వ్యాఖ్యలపై ఈసీకి బీజేపీ ఫిర్యాదు

ప్రధాని మోడీని ఉద్దేశించి కాంగ్రెస్ అధ్యక్షుడు మల్లిఖార్జున ఖర్గే చేసిన వ్యాఖ్యలు...

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ...