30
March, 2026

A News 365Times Venture

30
Monday
March, 2026

A News 365Times Venture

ಸಾಹಿತಿ ಎಸ್ ಎಲ್ ಭೈರಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ

Date:

ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಹಿರಿಯ ಸಾಹಿತಿ, ಕಾದಂಬರಿಕಾರ ಸಾಹಿತಿ ಎಸ್ ಎಲ್ ಭೈರಪ್ಪ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ, ಇಹದ “ಯಾನ” ಅಂತ್ಯ.. ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್.‌ ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Key words: CM Siddaramaiah, DCM, DK Shivakumar, condole, death, SL Bhyrappa

The post ಸಾಹಿತಿ ಎಸ್ ಎಲ್ ಭೈರಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮಾರ್ಚ್,30,2026 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್...

മനുഷ്യരുടെ എല്ലാ വോട്ടും വേണം, മതവര്‍ഗീയതയോട് യോജിപ്പില്ല; എസ്.ഡി.പി.ഐ വോട്ട് സ്വീകരിക്കുമോ എന്ന ചോദ്യത്തില്‍ ബിനോയ് വിശ്വം

കൊച്ചി: എല്ലാ മനുഷ്യരുടെയും വോട്ടുകള്‍ സ്വീകരിക്കുമെന്നും എന്നാല്‍ മതവര്‍ഗീയ സംവിധാനങ്ങളോട് ആശയപരമായി...

தேர்தல்: 'தனித்தொகுதி' Vs 'பொதுத்தொகுதி' – என்ன கணக்கு… எப்படி உருவானது?!

தமிழகத்தில் சட்டமன்றத் தேர்தல் திருவிழா களைகட்டத் தொடங்கிவிட்டது. அரசியல் கட்சிகளுக்கு இடையிலான...

Weight Loss Drugs: రూ.450తోనే బరువు తగ్గొచ్చు..! వైద్యుల వార్నింగ్..

Weight Loss Drugs: భారతదేశంలో బరువు తగ్గించే సెమాగ్లుటైడ్ మందు ఇప్పుడు...