30
March, 2026

A News 365Times Venture

30
Monday
March, 2026

A News 365Times Venture

ಮೋದಿ ಎದುರು ತಲೆ ಎತ್ತಿ ಮಾತನಾಡುವ ದಮ್ಮು ತಾಕತ್ತಿಲ್ಲದ ನಿಮಗೆ ಜಾತಿಗಣತಿ ವಿರೋಧಿಸುವ ಧೈರ್ಯವಿದೆಯೇ? ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಸೆಪ್ಟಂಬರ್,29,2025 (www.justkannada.in): ಪ್ರಧಾನಿಯ ಎದುರು ತಲೆ ಎತ್ತಿ ಮಾತನಾಡುವ ದಮ್ಮು-ತಾಕತ್ತು ಇಲ್ಲದ ನಿಮಗೆ  ಜಾತಿ ಗಣತಿಯನ್ನು ವಿರೋಧಿಸುವ ಧೈರ್ಯ ಇದೆಯೇ? ಯಾಕೆ ತಮ್ಮ ಮೂರ್ಖತನದ ಹೇಳಿಕೆಗಳ ಮೂಲಕ ರಾಜ್ಯದ ಪ್ರಜ್ಞಾವಂತ ಜನರ ಎದುರು ನಗೆಪಾಟಲಿಗೀಡಾಗುತ್ತಿದ್ದೀರಿ? ಎಂದು ಬಿಜೆಪಿ ನಾಯಕರ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಕರ್ನಾಟಕದಲ್ಲಿ ಜಾತಿಗಳನ್ನು ಪರಿಗಣಿಸಿ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರೇ, ನೀವು ಕೇಂದ್ರ ಸರ್ಕಾರದ ಜಾತಿ ಗಣತಿಯನ್ನೂ ವಿರೋಧಿಸುತ್ತೀರಾ? ಹಾಗೆ ವಿರೋಧಿಸುವುದಾದರೆ ಅದನ್ನು ಗಟ್ಟಿ ದನಿಯಲ್ಲಿ ಈಗಲೇ ಹೇಳಿಬಿಡಿ ಎಂದು ಸವಾಲು ಹಾಕಿದ್ದಾರೆ.

ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ಧವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು, ಹಿಂದುಳಿದವರು ಹಿಂದೆಯೇ ಉಳಿಯಬೇಕು ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು, ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ. ಬಿಜೆಪಿ ನಾಯಕರ ಅಂತರಂಗದಲ್ಲಿರುವುದು ಇದೇ ಮನುವಾದಿ ಮನಸ್ಥಿತಿ.

ನಮ್ಮ ಸರ್ಕಾರ ನಡೆಸುವ ಸಮೀಕ್ಷೆಯಿಂದ ಕೇವಲ ದಲಿತ, ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸ್ಥಿತಿ-ಗತಿ ಮಾತ್ರವಲ್ಲ, ಮುಂದುವರಿದ ಜಾತಿಗಳೊಳಗಿನ ಬಡವರು ಮತ್ತು ಅವಕಾಶ ವಂಚಿತರ ಸ್ಥಿತಿಗತಿಯೂ ಗೊತ್ತಾಗಲಿದೆ. ಈ ವಾಸ್ತವಸ್ಥಿತಿ ಅರಿವಾಗುವುದು ಬಿಜೆಪಿಯವರಿಗೆ ಬೇಡವಾಗಿದೆ. ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಪ್ರತಿಯೊಂದು ಜಾತಿ ಮತ್ತು ಧರ್ಮದೊಳಗಿನ ಉಳ್ಳವರ ಕೈಯಲ್ಲಿಯೇ ಇರಬೇಕು ಎನ್ನುವುದೇ ಅವರ ವಿರೋಧದ ಹಿಂದಿನ ದುರುದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಚಾಟಿ ಬೀಸಿದ್ದಾರೆ.

ಬಿಹಾರದಲ್ಲಿ ಇವರದ್ದೇ ಮೈತ್ರಿ ಸರ್ಕಾರ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದೇ ರೀತಿ ತೆಲಂಗಾಣದಲ್ಲಿಯೂ ನಡೆದಿದೆ. ಅಲ್ಲಿಯೂ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡಿದ್ದಾರೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ ಈಗ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಜಾತಿ ಗಣತಿ ಮಾಡಲು ಹೊರಟಿದೆ.

ಬಿಜೆಪಿ ನಾಯಕರ ಈ ಆತ್ಮವಂಚಕ ನಡವಳಿಕೆಯನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕು. ಅವರ ರಾಜಕೀಯ ಪ್ರೇರಿತ ಠಕ್ಕುತನದ ಹೇಳಿಕೆಗಳನ್ನು ಮನೆಯ ಕಸದ ಬುಟ್ಟಿಗೆ ಎಸೆದು ಎಲ್ಲರೂ ಈಗ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ ನೀಡಬೇಕು. ಈ ಮೂಲಕ ನಾವೆಲ್ಲರೂ ಸೇರಿ ಸಮ ಸಮಾಜವನ್ನು ನಿರ್ಮಾಣ ಮಾಡುವ ಮೂಲಕ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವನ್ನು ಮಾಡೋಣ ಎಂದು ವಿನಯಪೂರ್ವಕವಾಗಿ ಅರಿಕೆ ಮಾಡಿಕೊಳ‍್ಳುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Key words: Caste Census, BJP, CM Siddaramaiah

The post ಮೋದಿ ಎದುರು ತಲೆ ಎತ್ತಿ ಮಾತನಾಡುವ ದಮ್ಮು ತಾಕತ್ತಿಲ್ಲದ ನಿಮಗೆ ಜಾತಿಗಣತಿ ವಿರೋಧಿಸುವ ಧೈರ್ಯವಿದೆಯೇ? ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സത്യത്തെ വധിക്കുക എന്നതാണ് ഇസ്രഈലിന്റെ ലക്ഷ്യം; ലബനീസ് മാധ്യമ പ്രവർത്തകരുടെ കൊലയിൽ അപലപിച്ച് അരാഗ്ചി

ടെഹ്‌റാൻ: ലബനീസ് മാധ്യമ പ്രവർത്തകരുടെ കൊലപാതകത്തിൽ അപലപിച്ച് ഇറാൻ വിദേശകാര്യ മന്ത്രി...

திமுக தேர்தல் அறிக்கை: 'TV, Fridgeக்கு ரூ. 8000 மதிப்பிலான கூப்பன், 10 லட்சம் வீடுகள்'- முழு லிஸ்ட்

திமுக வருகிற சட்டமன்றத் தேர்தலில் 164 தொகுதிகளில் போட்டியிடுகிறது. நேற்று, போட்டியிடப்...

KKR vs MI : ముంబై ఇండియన్స్ చారిత్రాత్మక విజయం.. 14 ఏళ్ల నిరీక్షణకు తెర.!

KKR vs MI : ముంబై ఇండియన్స్ జట్టు ఐపీఎల్ చరిత్రలో...

ಉತ್ತರ ಕರ್ನಾಟಕದ ಅಭಿವೃದ್ಧಿ: ಶಾಸಕ ಅರವಿಂದ ಬೆಲ್ಲದ್ ತಿರುಗೇಟು ನೀಡಿದ  ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,28,2026 (www.justkannada.in): ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ...