29
March, 2026

A News 365Times Venture

29
Sunday
March, 2026

A News 365Times Venture

CJI ಮೇಲೆ ಶೂ ಎಸೆತಕ್ಕೆ ಖಂಡನೆ: ವಕೀಲನ ಬಂಧಿಸಿ ಕಾನೂನು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

Date:

ಬೆಂಗಳೂರು, ಅಕ್ಟೋಬರ್, 6,2025 (www.justkannada.in): ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು  ಎಂದು ಸಿಎಂ ಸಿದ್ದರಾಮಯ್ಯ  ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ.

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ  ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

Key words: CM Siddaramaiah, CJI, Shoe, lawyer, arrest

The post CJI ಮೇಲೆ ಶೂ ಎಸೆತಕ್ಕೆ ಖಂಡನೆ: ವಕೀಲನ ಬಂಧಿಸಿ ಕಾನೂನು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബി.ജെ.പി സീല്‍ വിവാദം: ഡെപ്യൂട്ടി സി.ഇ.ഒ മിഷാല്‍ സാഗര്‍ ഭരതിനെ മാറ്റി

തിരുവനന്തപുരം: തെരഞ്ഞെടുപ്പ് കമ്മീഷന്‍ രാഷ്ട്രീയ പാര്‍ട്ടികള്‍ക്കയച്ച കത്തില്‍ ബി.ജെ.പിയുടെ സീല്‍ ഉള്‍പ്പെട്ട...

அண்ணாவுக்கு பிறகு… நெடுஞ்செழியனை முந்தி கருணாநிதி முதல்வராக, திமுக தலைவராக மாறிய கதை! ஆடுபுலி 11

திமுகவில் துரைமுருகன், கே.என்.நேரு, பொன்முடி, டி.ஆர்.பாலு, ஆ.ராசா, அதிமுகவில் திண்டுக்கல் சீனிவாசன்,...

Story Board : ఇరాన్ ఉచ్చులో ట్రంప్..! యుద్ధం మొదలుపెట్టి.. ఎగ్జిట్ దొరకక అమెరికా అయోమయం

ఎవరైనా యుద్ధానికి ముందు వ్యూహరచన చేస్తారు. యుద్ధం మొదలయ్యాక కూడా అవసరమైతే...

ʼಮುಖ್ಯಮಂತ್ರಿ ಪದಕʼ ಪ್ರಕಟ: ಮೈಸೂರಿನ ನಾಲ್ವರು ಸೇರಿ ರಾಜ್ಯದ 153 ಪೊಲೀಸರಿಗೆ ಗೌರವ

  ಬೆಂಗಳೂರು, ಮಾ.೨೮,೨೦೨೬ : 2025ನೇ ಸಾಲಿನ ಮುಖ್ಯಮಂತ್ರಿ ಪದಕ (CM...